ಆನಂದ್ ಶರ್ಮಾ 
ದೇಶ

ತ್ರಿವಳಿ ತಲಾಖ್ ಮಸೂದೆಗೆ ಕಾಂಗ್ರೆಸ್ ಯಾವತ್ತೂ ವಿರೋಧಿಸಿಲ್ಲ: ಆನಂದ್ ಶರ್ಮಾ

ತ್ರಿವಳಿ ತಲಾಖ್ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗದಿರುವುದಕ್ಕೆ ಕಾಂಗ್ರೆಸ್ ಕಾರಣ...

ನವದೆಹಲಿ: ತ್ರಿವಳಿ ತಲಾಖ್ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗದಿರುವುದಕ್ಕೆ ಕಾಂಗ್ರೆಸ್ ಕಾರಣ ಎಂಬ ಬಿಜೆಪಿ ಆರೋಪವನ್ನು ಹಿರಿಯ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು ಶನಿವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ತ್ರಿವಳಿ ತಲಾಖ್ ಮಸೂದೆಯನ್ನು ಕಾಂಗ್ರೆಸ್ ಯಾವತ್ತೂ ವಿರೋಧಿಸಿಲ್ಲ. ಬಿಜೆಪಿ ಮಿತ್ರಪಕ್ಷಗಳೇ ಅದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿವೆ ಎಂದು ಶರ್ಮಾ ಹೇಳಿದ್ದಾರೆ.
ಬಿಜೆಪಿಗೆ ದೇಶದ ಮುಸ್ಲಿಂ ಮಹಿಳೆಯರ ಬಗ್ಗೆ ಕಾಳಜಿ ಇದ್ದರೆ ಒಳ್ಳೆಯ ವಿಚಾರ. ಆದರೆ ದೇಶದ ಪ್ರತಿ ಮಹಿಳೆಯ ಬಗ್ಗೆ? ಸ್ಪಷ್ಟ ಬಹುಮತ ಇದ್ದರೂ ಮಹಿಳಾ ಮೀಸಲಾತಿ ಮಸೂದೆಯನ್ನು ಏಕೆ ಮಂಡಿಸುತ್ತಿಲ್ಲ? ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ.
ಇದೇ ವೇಳೆ ಜಿಎಸ್ ಟಿ ಮತ್ತು ನೋಟು ಅಮಾನ್ಯೀಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಶರ್ಮಾ, ಮನಮೋಹನ್ ಸಿಂಗ್ ಅವರು ಪ್ರಜಾಪ್ರಭುತ್ವದ ಪ್ರಧಾನಿಯಾಗಿದ್ದರು. ಆದರೆ ಪ್ರಧಾನಿ ಮೋದಿ ಸರ್ವಾಧಿಕಾರಿಯಾಗಿದ್ದು, ನೋಟ್ ನಿಷೇಧದಿಂದಾಗಿ ಕೋಟ್ಯಾಂತರ ಜನ ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT