ಮುಂಬೈ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದ ಅಡಿಯಲ್ಲಿ ಭಾರತ ದುರಂತದತ್ತ ಸಾಗುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜು ಖರ್ಗೆಯವರು ಶನಿವಾರ ಹೇಳಿದ್ದಾರೆ.
ಪುಣೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ಅವರು, ಸಬ್ಸಿಡಿ ನೀಡುವ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ನಾವು ನಿಯಂತ್ರಿಸಿದ್ದೆವು. ಆದರೆ, ಬಿಜೆಪಿ ದೇಶದ ಸಾಮಾನ್ಯ ಜನರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ನೋಟು ನಿಷೇಧ ನಿರ್ಧಾರ ಕೈಗೊಂಡಾಗಲೂ ಸಾಮಾನ್ಯ ಜನರನ್ನು ತಿರಸ್ಕರಿಸಿದ್ದರು. ಆರ್ಥಿಕ ವ್ಯವಸ್ಥೆಯಲ್ಲಿ ಮೋದಿ ಸರ್ಕಾರ ವಿಫಲಗೊಂಡಿದೆ ಎಂದು ಹೇಳಿದ್ದಾರೆ.
ಬಿಜೆಪಿ ಚುನಾವಣಾ ಯಂತ್ರವಾಗಿ ಮಾರ್ಪಟ್ಟಿದೆ. ಈ ವರೆಗೂ ಯಾವುದೇ ಭರವಸೆಗಳನ್ನೂ ಈಡೇರಿಸಿಲ್ಲ. ಹಲವು ಹೆಸರಿನೊಂದಿಗೆ ಮೋದಿ ಕೇವಲ ಯೋಜನೆಗಳನ್ನಷ್ಟೇ ತಂದರು. ಆದರೆ, ಸೂಕ್ತ ರೀತಿಯಲ್ಲಿ ಅವುಗಳನ್ನು ಜಾರಿಗೆ ತರಲಿಲ್ಲ ಎಂದು ತಿಳಿಸಿದ್ದಾರೆ.