ಸಂಗ್ರಹ ಚಿತ್ರ 
ದೇಶ

ಕಾಶ್ಮೀರ: ಉಗ್ರರ ವಿರುದ್ಧ ಕಾರ್ಯಾಚರಣೆ. ಪ್ರತ್ಯೇಕತಾವಾದಿ ಸೇರಿ ಮೂವರು ಸಾವು

ಜಮ್ಮು ಮತ್ತು ಕಾಶ್ಮೀರದ ಎರಡು ಪ್ರತ್ಯೇಕ ಘಟನೆಗಳಲ್ಲಿ ಓರ್ವ ಪ್ರತ್ಯೇಕತಾವಾದಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಎರಡು ಪ್ರತ್ಯೇಕ ಘಟನೆಗಳಲ್ಲಿ ಓರ್ವ ಪ್ರತ್ಯೇಕತಾವಾದಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. 
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸುತ್ತಿದ್ದ ಕಾರ್ಯಾಚರಣೆ ವೇಳೆ ಗುಂಡು ತಗುಲಿ ತೆಹ್ರೀಕ್-ಇ-ಹುರಿಯತ್ ಸಂಘಟನೆಯ ಪ್ರತ್ಯೇಕತಾವಾಗಿ ಹಕಿಮ್-ಉಲ್-ರೆಹ್ಮಾನ್ ಸುಲ್ತಾನಿ ಎಂಬುವವರು ಸಾವನ್ನಪ್ಪಿದ್ದಾರೆ. 
ಅನಂತ್ ನಾಗ್ ಜಿಲ್ಲೆಯಲ್ಲಿ ಸೇನಾ ಪಡೆ ನಡೆಸಿದ್ದ ಎನ್'ಕೌಂಟರ್ ನಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಉಗ್ರ ಅನ್ಸಾರಿ ಗಜ್ವಾತ್-ಉಲ್ ಹಿಂದ್ ಸಾವನ್ನಪ್ಪಿದ್ದಾನೆ. 
ಈ ನಡುವೆ ಶಂಕಿತ ಉಗ್ರರು ಶ್ರೀನಗರದ ಹಜ್ರತ್ಬಾಲ್ ಎಂಬ ಪ್ರದೇಶದಲ್ಲಿ ಯುವಕನೊಬ್ಬನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಯುವಕ ಆಸೀಫ್ ನಾಜೀರ್ ದಾರ್ ಎಂಬಾತ ಸಾವನ್ನಪ್ಪಿದ್ದಾನೆ. ಮೃತಪಟ್ಟ ಯುವಕ ಆಸೀಫ್, ಜಾಕೀರ್ ಮೂಸಾ ರಚನೆ ಮಾಡಿರುವ ಅಲ್ ಖೈದಾ ಕಾಶ್ಮೀರ ಉಗ್ರ ಸಂಘಟನೆಗೆ ಸೇರಿದ ಅನ್ಸಾರಿ ಸಂಬಂಧಿಕನೆಂದು ಹೇಳಲಾಗುತ್ತಿದೆ. 
ಇದರಂತೆ ನಿನ್ನೆ ಸಂಜೆ ಪುಲ್ವಾಮ ಜಿಲ್ಲೆಯ ಜಮಿಯಾ ಮಸೀದಿ ಬಳಿಯಿದ್ದ ವಾಹನವೊಂದರ ಮೇಲೆ ಶಂಕಿತ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಸಿಮ್ರನ್ ಜಾನ್ ಎಂಬ ಮಹಿಳೆ ಗಾಯಗೊಂಡಿದ್ದಾರೆ. 
ಇದರಂತೆ ಉತ್ತರ ಕಾಶ್ಮೀರದ ರಾಣಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಓರ್ವ ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT