ಯಶವಂತ ಸಿನ್ಹಾ 
ದೇಶ

ಲೋಕಸಭಾ ಚುನಾವಣೆಯಲ್ಲಿ ಯಶವಂತ ಸಿನ್ಹಾ ಸ್ಪರ್ಧಿಸುವಂತೆ ಕೇಜ್ರಿವಾಲ್ ಒತ್ತಾಯ !

ಮಾಜಿ ಬಿಜೆಪಿ ನಾಯಕ ಯಶವಂತ ಸಿನ್ಹಾ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ನವದೆಹಲಿ: ಮಾಜಿ ಬಿಜೆಪಿ ನಾಯಕ ಯಶವಂತ ಸಿನ್ಹಾ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ಆದಾಗ್ಯೂ, ಮಾಜಿ ವಿತ್ತ ಸಚಿವರು ಯಾವ ಪಕ್ಷದಿಂದ ಯಾವ  ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಬಗ್ಗೆ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರು ಯಾವುದೇ ಹೆಸರನ್ನೂ  ಹೇಳಿಲ್ಲ.

ಯಶವಂತ ಸಿನ್ಹಾ ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ಮಾತನಾಡಿದ ಅರವಿಂದ್ ಕೇಜ್ರಿವಾಲ್,   ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಯಶವಂತ ಸಿನ್ಹಾ ಹೇಳಿದ್ದಾರೆ. ಆದರೆ. ನಿಮ್ಮಂತಹ ಒಳ್ಳೇಯ ವ್ಯಕ್ತಿಗಳೇ ಚುನಾವಣೆಗೆ ಸ್ಪರ್ಧಿಸದಿದ್ದರೆ ಮತ್ಯಾರು ಸ್ಪರ್ಧಿಸಬೇಕು, ಯಶವಂತ ಸಿನ್ಹಾ ಅವರು ಚುನಾವಣೆಗೆ ಸ್ಪರ್ಧಿಸಬೇಕು ಎಂಬುದು ಸಾರ್ವಜನಿಕರ ಬೇಡಿಕೆಯಾಗಿದ್ದು, ಅವರು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಕೇಜ್ರಿವಾಲ್ ಒತ್ತಾಯಿಸಿದರು.

ಉತ್ತರ ಪ್ರದೇಶ ಎಎಪಿ ಉಸ್ತುವಾರಿ ಸಂಜಯ್ ಸಿಂಗ್  ನೇತೃತ್ವದಲ್ಲಿ ನಡೆದ ಪಾದಯಾತ್ರೆ ಪ್ರಯುಕ್ತ ಆಯೋಜಿಸಿದ್ದ ಜನ ಅಧಿಕಾರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ವಿದ್ಯುತ ದರ ನಿಯಂತ್ರಿಸಿ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ.  ದೆಹಲಿಯಲ್ಲಿ 100 ಮೊಹಲ್ಲಾ ಕ್ಲಿನಿಕ್ ಗಳನ್ನು ತೆರೆಯಲಾಗಿದ್ದು, ಕಡಿಮೆ ಸುಂಕದಲ್ಲಿ ವಿದ್ಯುತ್ ನೀಡಲಾಗುತ್ತಿದೆ. ದೇಶಾದ್ಯಂತ ಇದನ್ನು ಮಾಡಲು ಮೋದಿಗೆ ಏಕೆ ಸಾಧ್ಯವಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?