ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ 
ದೇಶ

ಭಾರತ್ ಬಂದ್ ವಿಫಲಗೊಂಡಿದೆ, ತೈಲ ಬೆಲೆ ಏರಿಕೆ ಸಂಕಷ್ಟ ತಾತ್ಕಾಲಿಕ: ರವಿಶಂಕರ್ ಪ್ರಸಾದ್

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಯಾವ ಕಾರಣದಿಂದ ಆಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಂಡಿದ್ದು, ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ನಡೆಸುತ್ತಿರುವ ಭಾರತ ಬಂದ್ ವಿಫಲಗೊಂಡಿದೆ ಎಂದು ಬಿಜೆಪಿ ಸೋಮವಾರ...

ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಯಾವ ಕಾರಣದಿಂದ ಆಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಂಡಿದ್ದು, ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ನಡೆಸುತ್ತಿರುವ ಭಾರತ ಬಂದ್ ವಿಫಲಗೊಂಡಿದೆ ಎಂದು ಬಿಜೆಪಿ ಸೋಮವಾರ ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು, ಅಂತರಾಷ್ಟ್ರೀಯ ಬಿಕ್ಕಟ್ಟಿನಿಂದಾಗೂ ತೈಲ ಬೆಲೆ ಏರಿಕೆ ಕಂಡಿದ್ದು, ಈ ಸಂಕಷ್ಟ ತಾತ್ಕಾಲವಷ್ಟೇ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಯಾವ ಕಾರಣಕ್ಕೆ ಆಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಂಡಿದ್ದು, ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ನಡೆಸುತ್ತಿರುವ ಭಾರತ್ ಬಂದ್ ವಿಫಲಗೊಂಡಿದೆ ಎಂದು ಹೇಳಿದ್ದಾರೆ. 
ಭಾರತ್ ಬಂದ್'ಗೆ ವಿರುದ್ಧವಾಗಿ ಭಾರತದ ಜನತೆ ಏಕಿದ್ದಾರೆ? ಏಕೆಂದರೆ, ಬೆಲೆ ಏರಿಕೆ ಯಾವ ಕಾರಣಕ್ಕೆ ಆಗಿದೆ ಎಂಬುದನ್ನು ಅವರು ಅರ್ಥ ಮಾಡಿಕೊಂಡಿದ್ದಾರೆ. ಈ ಸಂಕಷ್ಟ ತಾತ್ಕಾಲಿಕವಷ್ಟೇ. ಭಾರತ ಸರ್ಕಾರದ ನಿಯಂತ್ರಣ ಸಾಮಾನ್ಯ ಭಾರತೀಯನ ಬಳಿಯಿದೆ ಎಂದು ತಿಳಿಸಿದ್ದಾರೆ. 
ಕೆಲ ಸಂಕಷ್ಟಗಳಿದ್ದರೂ ಜನರು ಬಂದ್'ಗೆ ಬೆಂಬಲ ನೀಡಿಲ್ಲ. ಭಾರತ್ ಬಂದ್ ವಿಫಲಗೊಂಡಿದೆ. ಹಿಂಸಾಚಾರ ಸೃಷ್ಟಿಸಿ ದೇಶದ ಜನತೆಯಲ್ಲಿ ಭೀತಿ ಹುಟ್ಟಿಸುತ್ತಿರುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. 
ಪೆಟ್ರೋಲ್ ವಿಶ್ವದೆಲ್ಲೆಡೆ ಅಗತ್ಯವಿರುವ ವಸ್ತುವಾಗಿದ್ದು, ಲಭ್ಯವಿಲ್ಲದ ಹಾಗೂ ಸೀಮಿತ ಸರಬರಾಜಿನಿಂದಾಗಿ ಪೆಟ್ರೋಲ್ ಮೇಲೆ ಸಾಕಷ್ಟು ನಿಬಂಧನೆಗಳನ್ನು ಹೇರಲಾಗಿದೆ. ಹಾಗೆಂದು ಬೆಲೆ ಏರಿಕೆಯನ್ನು ನಾವು ಸಮರ್ಥಿಸಿಕೊಳ್ಳುತ್ತಿಲ್ಲ. ಬೆಲೆ ಏರಿಕೆಯನ್ನು ಇಳಿಕೆ ಮಾಡಲು ಎನ್'ಡಿಎ ಸರ್ಕಾರ ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ. ಹಲವು ಬಾರಿ ಈ ಯತ್ನದಲ್ಲೂ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?