ದೇಶ

ರಾಜೀವ್‌ ಹಂತಕರ ಬಿಡುಗಡೆ; ಗವರ್ನರ್ ತಮಿಳುನಾಡು ಸರ್ಕಾರದ ಶಿಫಾರಸು ತಿರಸ್ಕಾರಸಲಿದ್ದಾರೆ: ಸ್ವಾಮಿ

Lingaraj Badiger
ನವದೆಹಲಿ: ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರ್ಕಾರ ಮಾಡಿರುವ ಶಿಫಾರಸನ್ನು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರು ತಿರಸ್ಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಭಾನುವಾರ ಹೇಳಿದ್ದಾರೆ. 
ಇಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಸಚಿವ ಸಂಪುಟ 
ಎಲ್ಲಾ ಏಳು ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ನಿರ್ಧರಿಸಿದೆ.
ತಮಿಳುನಾಡು ಸರ್ಕಾರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಸ್ವಾಮಿ, ಅದು ಕೇವಲ ಶಿಫಾರಸು ಮಾತ್ರ. ಅದನ್ನು ರಾಜ್ಯಪಾಲರು ಇನ್ನೂ ಅಂಗೀಕರಿಸಿಲ್ಲ. ರಾಜ್ಯಪಾಲರಿಗೆ ಸಂಪೂರ್ಣ ವಿವೇಚನಾ ಅಧಿಕಾರ ಇದ್ದು, ಅವರು ದಾಖಲೆಗಳನ್ನು ಆಧರಿಸಿ ಶಿಫಾರಸನ್ನು ತರಿಸ್ಕರಿಸುವ ಭರವಸೆ ಇದೆ ಎಂದರು.
SCROLL FOR NEXT