ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಕಾಂಗ್ರೆಸ್ ಮುಖಂಡ ಉತ್ತಮ ಕುಮಾರ್ ರೆಡ್ಡಿ 
ದೇಶ

ತೆಲಂಗಾಣದಲ್ಲಿ ಕೆಸಿಆರ್ ವಿರುದ್ಧ 'ಕೈ'ಜೋಡಿಸಿದ ಟಿಡಿಪಿ, 36 ವರ್ಷದ ದ್ವೇಷಕ್ಕೆ ಅಂತ್ಯ

ರಾಜಕೀಯ ಬದ್ಧ ವೈರಿಗಳಾಗಿದ್ದ ಕಾಂಗ್ರೆಸ್ ಮತ್ತು ಟಿಡಿಪಿ ಮಂಗಳವಾರ ಜಂಟಿ ಸಭೆ ನಡೆಸುವ ಮೂಲಕ ತೆಲುಗು...

ಹೈದರಾಬಾದ್: ರಾಜಕೀಯ ಬದ್ಧ ವೈರಿಗಳಾಗಿದ್ದ ಕಾಂಗ್ರೆಸ್ ಮತ್ತು ಟಿಡಿಪಿ ಮಂಗಳವಾರ ಜಂಟಿ ಸಭೆ ನಡೆಸುವ ಮೂಲಕ ತೆಲುಗು ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭಿಸಿವೆ.
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಹಂಗಾಮಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಟಿಆರ್ ಎಸ್ ಅನ್ನು ಎದುರಿಸಲು ಕಾಂಗ್ರೆಸ್ ಮತ್ತು ಟಿಡಿಪಿ ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದು, ಈ ಸಂಬಂಧ ಇಂದು ಜಂಟಿ ಸಭೆ ನಡೆಸಿ ಸಾಮಾನ್ಯ ಪ್ರಣಾಳಿಕೆ ಸಿದ್ಧಪಡಿಸುವ ನಿರ್ಧಾರ ಬರಲಾಗಿದೆ.
ಸಭೆಯಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್ ಉತ್ತಮ ಕುಮಾರ್ ರೆಡ್ಡಿ, ತೆಲಂಗಾಣ ಟಿಡಿಪಿ ಅಧ್ಯಕ್ಷ ಎಲ್ ರಮಣ, ಸಿಪಿಐ ರಾಜ್ಯ ಕಾರ್ಯದರ್ಶಿ ಚಡ ವೆಂಕಟ್ ರೆಡ್ಡಿ ಹಾಗೂ ಇತರರು ಭಾಗವಹಿಸಿದ್ದರು.
ಕೆಸಿಆರ್ ವಿರುದ್ಧ ಮಹಾಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ ನಂತರ ನಡೆದ ಮೊದಲ ಸಭೆ ಇದಾಗಿದ್ದು, ಟಿಡಿಪಿ, ಕಾಂಗ್ರೆಸ್ ನೊಂದಿಗಿನ 36 ವರ್ಷಗಳ ದ್ವೇಷ ಮರೆತು ಮೈತ್ರಿಗೆ ಕೈಜೋಡಿಸಿದೆ.
ತೆಲಂಗಾಣದಲ್ಲಿ ಕೆಸಿಆರ್ ಅವರ ಸರ್ವಾಧಿಕಾರಿ ಮತ್ತು ದುರಾಡಳಿತಕ್ಕೆ ಅಂತ್ಯ ಹಾಡಲು ಕಾಂಗ್ರೆಸ್ ಟಿಡಿಪಿ ಜತೆ ಕೈಜೋಡಿಸಿದೆ. ಇಂದು ನಾವು ಟಿಡಿಪಿ ಮತ್ತು ಸಿಪಿಐ ಜತೆ ಪ್ರಾಥಮಿಕ ಹಂತದ ಮಾತುಕತೆ ನಡೆಸಿದ್ದೇವೆ. ಟಿಡಿಪಿ ಮತ್ತು ಸಿಪಿಐ ಸಾಮಾನ್ಯ ಪ್ರಣಾಳಿಕೆಗೆ ಒಪ್ಪಿಕೊಂಡಿವೆ ಎಂದು ಸಭೆಯ ನಂತರ ಉತ್ತಮ್ ಕುಮಾರ್ ಅವರು ತಿಳಿಸಿದ್ದಾರೆ.
ಪ್ರತಿಪಕ್ಷಗಳನ್ನು ಒಗ್ಗೂಡಿಸಲು ನಮ್ಮ ಪಕ್ಷ ಯತ್ನಿಸುತ್ತಿದೆ ಮತ್ತು ಈ ಸಂಬಂಧ ಸಿಪಿಐ, ಕೊಂಡರಾಮ್(ಟಿಜೆಎಸ್) ಹಾಗೂ ಟಿಡಿಪಿ ಜತೆ ನಿರಂತರ ಸಂಪರ್ಕದಲ್ಲಿದೆ ಎಂದು ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಆರ್ ಸಿ ಖುಂಟಿಯಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test: ವಿಂಡೀಸ್ ವಿರುದ್ಧ ಕುಲದೀಪ್ ಯಾದವ್ ಭರ್ಜರಿ ಬೌಲಿಂಗ್, ವಿಶ್ವ ದಾಖಲೆ

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

SCROLL FOR NEXT