ಸಾಂದರ್ಭಿಕ ಚಿತ್ರ 
ದೇಶ

ಬಿಹಾರ: ರೈಲ್ವೆ ಸಿಬ್ಬಂದಿಯಿಂದ ಹಣ ಲೂಟಿ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯ ಹತ್ಯೆ

ಬಿಹಾರದ ರೋಹಟಕ್ ಜಿಲ್ಲೆಯಲ್ಲಿ ರೈಲ್ವೆ ಸಿಬ್ಬಂದಿಯಿಂದ ಸುಮಾರು 24 ಲಕ್ಷ ರುಪಾಯಿ ಲೂಟಿ ಮಾಡಲು ಯತ್ನಿಸುತ್ತಿದ್ದ...

ಪಾಟ್ನ: ಬಿಹಾರದ ರೋಹಟಕ್ ಜಿಲ್ಲೆಯಲ್ಲಿ ರೈಲ್ವೆ ಸಿಬ್ಬಂದಿಯಿಂದ ಸುಮಾರು 24 ಲಕ್ಷ ರುಪಾಯಿ ಲೂಟಿ ಮಾಡಲು ಯತ್ನಿಸುತ್ತಿದ್ದ ಮೂವರ ಪೈಕಿ ಓರ್ವನನ್ನು ಹೊಡೆದು ಕೊಂದ ಘಟನೆ ಮಂಗಳವಾರ ನಡೆದಿದೆ.
ಸಸಾರಾಮ್ ರೈಲ್ವೆ ನಿಲ್ದಾಣದ ರೇಲ್ವೆ ಸಿಬ್ಬಂದಿ ಮೇಲೆ ಮೂವರು ದರೋಡೆಕೋರರು ಹಲ್ಲೆ ನಡೆಸಿದ್ದಲ್ಲದೆ ಜನರನ್ನು ಹೆದುರಿಸಲು ಗುಂಡು ಹಾರಿಸಿದ್ದು, ಓರ್ವ ಮಹಿಳೆ ಗಾಯಗೊಂಡಿದ್ದಾರೆ ಎಂದು ನಗರ ಪೊಲೀಸ್ ಠಾಣೆಯ ಅಧಿಕಾರಿ ಆರ್ ಬಿ ಪಾಸ್ವಾನ್ ಅವರು ತಿಳಿಸಿದ್ದಾರೆ.
ಬುಕ್ಕಿಂಗ್ ಸಹಾಯಕ ಅಶೋಕ್ ಕುಮಾರ್ ಮತ್ತು ಬುಕ್ಕಿಂಗ್ ಮೇಲ್ವಿಚಾರಕ ಶೈಲೇಶ್ ಕುಮಾರ್ ಅವರು 24.78 ಲಕ್ಷ ರುಪಾಯಿ ಬ್ಯಾಂಕಿಗೆ ಜಮೆ ಮಾಡಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಬೈಕ್ ನಲ್ಲಿ ಬಂದ ಮೂವರು ಯುವಕರು ರೇಲ್ವೆ ಸಿಬ್ಬಂದಿ ಬಳಿ ಇದ್ದ ಹಣದ ಬ್ಯಾಗ್ ಕಿತ್ತಿಕೊಳ್ಳಲು ಯತ್ನಿಸಿದ್ದಾರೆ. ಬ್ಯಾಗ್ ನೀಡಲು ನಿರಾಕರಿಸಿದ ಅಶೋಕ್ ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ದರೋಡೆಕೋರರನ್ನು ಹಿಡಿದು ಥಳಿಸಿದ್ದಾರೆ. ಇಬ್ಬರು ತಪ್ಪಿಸಿಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ 20 ವರ್ಷದ ಮತ್ತೊಬ್ಬ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾರೆ ಎಂದು ಪಾಸ್ವಾನ್ ತಿಳಿಸಿದ್ದಾರೆ. 
ಕಳೆದ ಒಂದು ವಾರದಲ್ಲಿ ನಡೆಯುತ್ತಿರುವ ಮೂರನೇ ಗುಂಪು ಹತ್ಯೆ ಇದಾಗಿದ್ದು, ತಪ್ಪಿಸಿಕೊಂಡ ಇತರೆ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT