ನನ್ನ ಚಿಕಾಗೋ ಕಾರ್ಯಕ್ರಮ ರದ್ದುಗೊಳಿಸಲು ರಾಮಕೃಷ್ಣ ಮಿಷನ್ ಗೆ ಒತ್ತಡ ಹೇರಲಾಗಿತ್ತು: ಮಮತಾ ಬ್ಯಾನರ್ಜಿ 
ದೇಶ

ನನ್ನ ಚಿಕಾಗೋ ಕಾರ್ಯಕ್ರಮ ರದ್ದುಗೊಳಿಸಲು ರಾಮಕೃಷ್ಣ ಮಿಷನ್ ಗೆ ಒತ್ತಡ ಹೇರಲಾಗಿತ್ತು: ಮಮತಾ ಬ್ಯಾನರ್ಜಿ

ಸ್ವಾಮಿ ವಿವೇಕಾನಂದರ ಐತಿಹಾಸಿಕ ಭಾಷಣದ 125 ನೇ ವಾರ್ಷಿಕೋತ್ಸವದ ಅಂಗವಾಗಿ ಚಿಕಾಗೋದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳದಂತೆ ಕೆಲವು ದುಷ್ಟ ಶಕ್ತಿಗಳು ತಡೆದಿವೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಕೋಲ್ಕತ್ತಾ: ಸ್ವಾಮಿ ವಿವೇಕಾನಂದರ ಐತಿಹಾಸಿಕ ಭಾಷಣದ 125 ನೇ ವಾರ್ಷಿಕೋತ್ಸವದ ಅಂಗವಾಗಿ ಚಿಕಾಗೋದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳದಂತೆ ಕೆಲವು ದುಷ್ಟ ಶಕ್ತಿಗಳು ತಡೆದಿವೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. 
ಚಿಕಾಗೋದಲ್ಲಿ ನಡೆಯಲಿದ್ದ ಕಾರ್ಯಕ್ರಮದ್ಲಲಿ ನಾನು ಭಾಗವಹಿಸುವುದನ್ನು ಕೆಲವು ದುಷ್ಟಶಕ್ತಿಗಳು ಸಹಿಸಲಿಲ್ಲ, ಬಹುಶಃ ಆದ್ದರಿಂದ ಚಿಕಾಗೋದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ರಾಮಕೃಷ್ಣಾಶ್ರಮಕ್ಕೆ ಬೆದರಿಕೆ ಹಾಕಲಾಗಿದೆ ಆದ್ದರಿಂದ ಕಾರ್ಯಕ್ರಮ ರದ್ದುಗೊಂಡಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. 
ಈ ಬೆಳವಣಿಗೆಯಿಂದಾಗಿ ನನಗೆ ತುಂಬಾ ನೋವುಂಟಾಗಿದೆ ಎಂದು ರಾಮಕೃಷ್ಣಾಶ್ರಮದ ಮುಖ್ಯ ಕಚೇರಿ ಬೇಲೂರು ಮಠದಲ್ಲಿ ಹೇಳಿದ್ದಾರೆ. ಚಿಕಾಗೋದಲ್ಲಿ ನಡೆದ ಕಾರ್ಯಕ್ರಮ ರದ್ದುಗೊಂಡಿರುವುದಕ್ಕೆ ನಾನು ರಾಮಕೃಷ್ಣಾಶ್ರಮವನ್ನು ದೂಷಿಸುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT