ಸಂಗ್ರಹ ಚಿತ್ರ 
ದೇಶ

ಬಹುಕೋಟಿ ಚಾಪರ್ ಹಗರಣ: ಪ್ರಮುಖ ಆರೋಪಿ ಐಎಎಫ್ ಮಾಜಿ ಮುಖ್ಯಸ್ಥ ಎಸ್ ಪಿ ತ್ಯಾಗಿಗೆ ಜಾಮೀನು!

ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಬಹುಕೋಟಿ ವಿವಿಐಪಿ ಚಾಪರ್ ಹಗರಣದ ಪ್ರಮುಖ ಆರೋಪಿ ಭಾರತೀಯ ವಾಯು ಸೇನೆ ಮುಖ್ಯಸ್ಥ ಎಸ್ ಪಿ ತ್ಯಾಗಿಗೆ ದೆಹಲಿ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ನವದೆಹಲಿ: ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಬಹುಕೋಟಿ ವಿವಿಐಪಿ ಚಾಪರ್ ಹಗರಣದ ಪ್ರಮುಖ ಆರೋಪಿ ಭಾರತೀಯ ವಾಯು ಸೇನೆ ಮುಖ್ಯಸ್ಥ ಎಸ್ ಪಿ ತ್ಯಾಗಿಗೆ ದೆಹಲಿ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಎಸ್ ಪಿ ತ್ಯಾಗಿ ಪರ ವಕೀಲರು ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿ ಕೋರ್ಟ್ ನ ವಿಶೇಷ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು, ಎಸ್ ಪಿ ತ್ಯಾಗಿ ಮತ್ತು ಅವರ ಸಹೋದರ ಸಂಬಂಧಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದ್ದಾರೆ. ಎಲ್ಲ ಆರೋಪಿಗಳಿಗೂ ತಲಾ ಒಂದು ಲಕ್ಷ ರೂ. ಭದ್ರತಾ ಶೂರಿಟಿ ನೀಡಿ ಜಾಮೀನು ಪಡೆಯುವಂತೆ ಕೋರ್ಟ್ ಸೂಚನೆ ನೀಡಿದೆ. ಅಂತೆಯೇ ಮುಂದಿನ ವಿಚಾರಣೆಗಳಿಗೆ ಅಗತ್ಯಬಿದ್ದರೆ ಕಡ್ಡಾಯ ಹಾಜರಾಗಬೇಕು ಎಂದು ನ್ಯಾಯಾಧೀಶರು ಸೂಚಿಸಿದ್ದಾರೆ. ಅಂತೆಯೇ ಪ್ರಕರಣದ ಮುಂದಿನ ವಿಚಾರಣೆಯನ್ನು ಮುಂದೂಡಿದ್ದಾರೆ.
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಈ ಹಿಂದೆ ಜುಲೈ 24 ರಂದು ಪ್ರಕರಣದ ಆರೋಪಿಗಳಾದ ಎಸ್ ಪಿ ತ್ಯಾಗಿ, ಮಧ್ಯವರ್ತಿಗಳಾದ ಅಗಸ್ಟಾ ವೆಸ್ಟ್ ಲ್ಯಾಂಡ್ ಮತ್ತು ಫಿನ್ ಮೆಕ್ಕಾನಿಕಾ ಸಂಸ್ಥೆಯ ನಿರ್ದೇಶಕ ಗಿಸೆಪ್ಪೆ ಓರ್ಸಿ ಮತ್ತು ಬ್ರುನೋ ಸ್ಪಾಂಗ್ನೋಲಿನಿ ಅವರಿಗೆ ಸಮನ್ಸ್ ಜಾರಿ ಮಾಡಿತ್ತು.
ಸಮನ್ಸ್ ಹಿನ್ನಲೆಯಲ್ಲಿ ಎಸ್ ಪಿ ತ್ಯಾಗಿ ಮತ್ತು ಅವರ ಸಹದೋರ ಸಂಬಂಧಿಗಳು ಕೋರ್ಟ್ ಹಾಜರಾಗಿ ಜಾಮೀನು ಪಡೆದಿದ್ದಾರೆ. ಪ್ರಕರಣದ ಉಳಿದ ಆರೋಪಿಗಳಾದ ಗಿಸೆಪ್ಪೆ ಓರ್ಸಿ, ಬ್ರುನೋ ಸ್ಪಾಂಗ್ನೋಲಿನಿ  ಮತ್ತು ದುಬೈ ಮೂಲದ ಉದ್ಯಮಿ ರಾಜೀಲ್ ಸಕ್ಸೇನಾ ಅವರು ಸೇರಿದಂತೆ ಭಾರತೀಯ ಮೂಲದ 28 ಆರೋಪಗಿಳಿಗೆ ಮತ್ತು ಕೆಲ ವಿದೇಶಿ ಉದ್ಯಮಿಗಳಿಗೆ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ