ಪ್ರಧಾನಿ ನರೇಂದ್ರ ಮೋದಿ 
ದೇಶ

ಸೆ.15 ರಂದು 'ಸ್ವಚ್ಛತೆಯೇ ಸೇವೆ' ಆಂದೋಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಇದೇ ತಿಂಗಳ 15 ರಂದು ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ ಚಾಲನೆ ದೊರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ರಾಷ್ಟ್ರಪತಿ ಮಹಾತ್ಮಗಾಂಧಿ ಅವರ 150 ಜನ್ಮ ವಾರ್ಷಿಕೋತ್ಸವ ಅಂಗವಾಗಿ ಈ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.

ನವದೆಹಲಿ: ಇದೇ ತಿಂಗಳ 15 ರಂದು ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ  ಚಾಲನೆ ದೊರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರಪತಿ ಮಹಾತ್ಮಗಾಂಧಿ ಅವರ 150 ಜನ್ಮ ವಾರ್ಷಿಕೋತ್ಸವ  ಅಂಗವಾಗಿ ಈ  ಆಂದೋಲನವನ್ನು  ಹಮ್ಮಿಕೊಳ್ಳಲಾಗಿದೆ.

ಈ ಆಂದೋಲನದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು ಮತ್ತು ಸ್ವಚ್ಛ ಭಾರತ ನಿರ್ಮಾಣ ಮಾಡಲು ದೃಢ ಸಂಕಲ್ಪ ಮಾಡುವಂತೆ  ನರೇಂದ್ರಮೋದಿ ಸರಣಿ ಟ್ವಿಟ್ ಸಂದೇಶದಲ್ಲಿ ಒತ್ತಾಯಿಸಿದ್ದಾರೆ.

ಅಕ್ಟೋಬರ್ 2 ಮಹಾತ್ಮಗಾಂಧಿ ಅವರ 150 ಜನ್ಮ ದಿನ ವಾರ್ಷಿಕೋತ್ಸವ  ಅಲ್ಲದೇ, ಮಹಾತ್ಮಗಾಂಧಿ ಅವರ  ಸ್ವಚ್ಛ ಭಾರತ ಕನಸು  ಈಡೇರಿಸುವ ನಿಟ್ಟಿನಲ್ಲಿ ಹಾಕಿಕೊಳ್ಳದ ಸ್ವಚ್ಛ ಭಾರತ ಮಿಷನ್ 4 ವರ್ಷ ಪೂರ್ಣಗೊಳಿಸಿದ ದಿನವಾಗಿದ್ದು, ಸ್ವಚ್ಛ ಭಾರತ  ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಎಲ್ಲರಿಗೂ ನಮನ ಸಲ್ಲಿಸುವುದಾಗಿ  ಪ್ರಧಾನಿ ಹೇಳಿದ್ದಾರೆ.

 ಸ್ವಚ್ಚತೆಯೇ ಸೇವೆ ಆಂದೋಲನ  ಸೆಪ್ಟೆಂಬರ್ 15 ರಿಂದ ಆರಂಭವಾಗಲಿದೆ. ಮಹಾತ್ಮ ಗಾಂಧೀಜಿ ಅವರಿಗೆ ನಮನ ಸಲ್ಲಿಸಲು ಇದೊಂದು ದಾರಿಯಾಗಿದ್ದು, ಈ ಆಂದೋಲನದ ಭಾಗವಾಗಿ  ಸ್ವಚ್ಛ ಭಾರತ ನಿರ್ಮಾಣಕ್ಕೆ ದೃಢ ಸಂಕಲ್ಪ ಮಾಡಿ ಎಂದು ಟ್ವಿಟ್ ಸಂದೇಶದಲ್ಲಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT