ಸಂಗ್ರಹ ಚಿತ್ರ 
ದೇಶ

ಚೌತಿಯಂದೇ 4 ಉಗ್ರರ ಸೆದೆ ಬಡಿದ ಸೇನೆ, ಪ್ರತ್ಯೇಕ ಪ್ರಕರಣಗಳಲ್ಲಿ 9 ಸೈನಿಕರಿಗೆ ಗಾಯ

ದೇಶಾದ್ಯಂತ ಜನ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ ಅತ್ತ ಕಾಶ್ಮೀರದಲ್ಲಿ ಮಾತ್ರ ಸೈನಿಕರು ಉಗ್ರರ ವಿರುದ್ಧ ಎನ್ ಕೌಂಟರ್ ನಲ್ಲಿ ತೊಡಗಿದ್ದು, 2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 4 ಮಂದಿ ಉಗ್ರರ ಹುಟ್ಟಡಗಿಸಿದ್ದಾರೆ.

ಶ್ರೀನಗರ: ದೇಶಾದ್ಯಂತ ಜನ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ ಅತ್ತ ಕಾಶ್ಮೀರದಲ್ಲಿ ಮಾತ್ರ ಸೈನಿಕರು ಉಗ್ರರ ವಿರುದ್ಧ ಎನ್ ಕೌಂಟರ್ ನಲ್ಲಿ ತೊಡಗಿದ್ದು, 2 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 4 ಮಂದಿ ಉಗ್ರರ ಹುಟ್ಟಡಗಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ, ಸಿಆರ್​ಪಿಎಫ್​ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಜೈಷ್​ ಎ ಮೊಹಮ್ಮದ್​ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಅಂತೆಯೇ ಗುಂಡಿನ ಚಕಮಕಿಯಲ್ಲಿ 9 ಯೋಧರು ಗಾಯಗೊಂಡಿದ್ದಾರೆ.
ಇನ್ನು ಬಾರಾಮುಲ್ಲಾ ಎನ್ ಕೌಂಟರ್ ವೇಳೆ ಇಬ್ಬರು ಉಗ್ರರು ತಪ್ಪಿಸಿಕೊಂಡಿದ್ದು, ತಪ್ಪಿಸಿಕೊಂಡಿದ್ದ ಉಗ್ರರಿಗಾಗಿ ಸೇನೆ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ರಿಯಾಸಿ ಜಿಲ್ಲೆಯ ಕಕರಿಯಾಲ್​ ಪ್ರದೇಶದ ಮನೆಯೊಂದರಲ್ಲಿ ಅಡಗಿದ್ದ ಉಗ್ರರನ್ನು ಹೊಡೆದುರುಳಿಸಲು ಭದ್ರತಾ ಪಡೆಗಳು ಗುರುವಾರ ಕಾರ್ಯಾಚರಣೆಯನ್ನು ನಡೆಸಿದ್ದವು. ಈ ಸಂದರ್ಭದಲ್ಲಿ ಉಗ್ರರು ಭದ್ರತಾ ಸಿಬ್ಬಂದಿಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದರಿಂದಾಗಿ ಡಿಎಸ್​ಪಿ ಮೋಹನ್​ ಲಾಲ್​ ಸೇರಿದಂತೆ ಐವರು ಸಿಆರ್​ಪಿಎಫ್​ ಯೋಧರು ಮತ್ತು ಮೂವರು ಪೊಲೀಸರು ಗಾಯಗೊಂಡಿದ್ದಾರೆ.
ಇದೀಗ ಇದೇ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತಿಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ವಾತ್ಲಾಬ್​ ಸೆಕ್ಟರ್​ನ ಕಮಾಂಡರ್​ ಬ್ರಿಗೇಡಿಯರ್​ ವಿ ಹರಿಹರನ್​ ತಿಳಿಸಿದ್ದಾರೆ.
ವರದಿಗಾಗಿ ತೆರಳಿದ್ದ ಪತ್ರಕರ್ತರ ಪ್ರಾಣದ ಹಂಗು ತೊರೆದು ರಕ್ಷಣೆ ಮಾಡಿದ ಸೇನೆ
ಇನ್ನು ರಿಯಾಸಿ ಜಿಲ್ಲೆಯ ಕಕರಿಯಾಲ್​ ಪ್ರದೇಶದಲ್ಲಿ ನಡೆಯುತ್ತಿದ್ದ ಎನ್ ಕೌಂಟರ್ ವರದಿಗೆ ತೆರಳಿದ್ದ ಪತ್ರಕರ್ತರೂ ಕೂಡ ಅಪಾಯಕ್ಕೆ ಸಿಲುಕಿದ ಘಟನೆ ನಡೆದಿತ್ತು. ಈ ವೇಳೆ ಸ್ಥಳದಲ್ಲಿದ್ದ ಸೈನಿಕರು ಪತ್ರಕರ್ತರನ್ನು ನೆಲದ ಮೇಲೆ ಮಲಗಿಸಿ ಉಗ್ರರ ವಿರುದ್ಧ ಗುಂಡಿನ ದಾಳಿ ನಡೆಸಿದರು. ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT