ನಿರ್ಮಲಾ ಸೀತಾರಾಮನ್ 
ದೇಶ

ಎಚ್ ಎಎಲ್ ಅಸಾಮರ್ಥ್ಯದಿಂದ ರಾಫೆಲ್ ಡೀಲ್ ರದ್ದಾಗಿತ್ತು: ನಿರ್ಮಲಾ ಸೀತಾರಾಮನ್

ಯುಪಿಎ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್ಎಎಲ್) ಯುದ್ಧ...

ನವದೆಹಲಿ: ಯುಪಿಎ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್ಎಎಲ್) ಯುದ್ಧ ವಿಮಾನ ನಿರ್ಮಿಸಲು ಅಗತ್ಯ ಸಾಮರ್ಥ್ಯ ಹೊಂದಿಲ್ಲದ ಕಾರಣಕ್ಕೆ 126 ರಾಫೆಲ್ ಯುದ್ಧ ವಿಮಾನ ಖರೀದಿಯ ಒಪ್ಪಂದ ಮುರಿದುಬಿದ್ದಿತ್ತು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಹೇಳಿದ್ದಾರೆ.
2013ರಲ್ಲಿ ವೆಚ್ಚ ಸಮಾಲೋಚನಾ ಸಮಿತಿಯು ಯುದ್ಧ ವಿಮಾನ ಖರೀದಿಗೆ ಒಪ್ಪಂದಕ್ಕೆ ಅಂತಿಮ ರೂಪ ನೀಡುತ್ತಿರುವಾಗ ಅಂದಿನ ರಕ್ಷಣಾ ಸಚಿವ ಎ. ಕೆ. ಆಂಟನಿ ಅತಿಯಾದ ಹಸ್ತಕ್ಷೇಪವೂ ಎಚ್ ಎಎಲ್ ಜೊತೆಗಿನ ಒಪ್ಪಂದ ರದ್ದಾಗಲು ಕಾರಣ ಎಂದು ಸೀತಾರಾಮನ್ ಆರೋಪಿಸಿದ್ದಾರೆ. 
ಎಚ್ ಎಎಲ್ ಜೊತೆಗೆ ಹಲವು ಸುತ್ತಿನ ಮಾತುಕತೆ ನಡೆಸಿದ ನಂತರ ಡಸಾಲ್ಟ್ ಏವಿಯೇಷನ್, ಭಾರತದಲ್ಲಿ ಉತ್ಪಾದಿಸಬೇಕಾದರೆ ರಾಫೆಲ್ ಯುದ್ಧ ವಿಮಾನಗಳ ವೆಚ್ಚ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ಹೇಳಿತ್ತು ಎಂದು ಸೀತಾರಾಮನ್ ಅವರು ಇಂದು ಪಿಟಿಐ ಸಂಪಾದಕರೊಂದಿಗಿನ ಸಂವಾದದಲ್ಲಿ ತಿಳಿಸಿದ್ದಾರೆ.
ಒಪ್ಪಂದಕ್ಕೆ ಸಂಬಂಧಿಸಿದಂತೆ ಎಚ್ಎಎಲ್ ಜೊತೆಗಿನ ಮಾತುಕತೆಯಲ್ಲಿ ಡಸ್ಸಾಲ್ಟ್ ಪ್ರಗತಿ ಸಾಧಿಸಲಿಲ್ಲ. ಏಕೆಂದರೆ ವಿಮಾನವನ್ನು ಭಾರತದಲ್ಲಿ ಉತ್ಪಾದಿಸಬೇಕಾದರೆ, ಉತ್ಪಾದಿಸುವ ಉತ್ಪನ್ನಕ್ಕೆ ಒಂದು ಗ್ಯಾರಂಟಿ ನೀಡಬೇಕಾಗಿತ್ತು. ಇದು ದೊಡ್ಡ ಸಮಸ್ಯೆಯಾಗಿತ್ತು ಮತ್ತು ಐಎಎಫ್ ಸಹ ಯುದ್ಧ ವಿಮಾನಗಳಿಗೆ ಗ್ಯಾರಂಟಿ ಬೇಕು ಎಂದಿತ್ತು. ಆದರೆ ಎಚ್ ಎಎಲ್ ಗ್ಯಾರಂಟಿ ನೀಡುವ ಪರಿಸ್ಥಿತಿಯಲ್ಲಿ ಇರಲಿಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT