ಚಂದ್ರಬಾಬು ನಾಯ್ಡು 
ದೇಶ

ಮಹಾ ಕೋರ್ಟ್ ನಿಂದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಬಂಧನ ವಾರಂಟ್

2010ರಲ್ಲಿ ಬಾಬ್ಲಿ ಅಣೆಕಟ್ಟು ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ...

ಅಮರಾವತಿ: 2010ರಲ್ಲಿ ಬಾಬ್ಲಿ ಅಣೆಕಟ್ಟು ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹಾಗೂ ಇತರೆ 15 ಮಂದಿ ವಿರುದ್ಧ ಮಹಾರಾಷ್ಟ್ರ ಕೋರ್ಟ್ ಗುರುವಾರ ಬಂಧನ ವಾರಂಟ್ ಜಾರಿ ಮಾಡಿದೆ.
ನಾಂದೇಡ್ ಜಿಲ್ಲೆಯ ಧರ್ಮಾಬಾದ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಕೋರ್ಟ್, ಆಂಧ್ರ ಸಿಎಂ ಹಾಗೂ ಇತರರ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದ್ದು, ಸೆಪ್ಟೆಂಬರ್ 21ರೊಳಗೆ ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸುವಂತೆ ಪೊಲೀಸರಿಗೆ ಸೂಚಿಸಿದೆ.
ಚಂದ್ರಬಾಬು ನಾಯ್ಡು ಅವರು ಪ್ರತಿಪಕ್ಷದಲ್ಲಿದ್ದಾಗ ಗೋದಾವರಿ ನದಿಗೆ ಅಡ್ಡವಾಗಿ ಮಹಾರಾಷ್ಟ್ರ ಸರ್ಕಾರ ನಿರ್ಮಿಸುತ್ತಿರುವ ಬಾಬ್ಲಿ ಅಣೆಕಟ್ಟು ಯೋಜನೆಯನ್ನು ವಿರೋಧಿಸಿ ಆಂಧ್ರಪ್ರದೇಶ ಗಡಿ ಜಿಲ್ಲೆ ನಾಂದೇಡ್‌ ನ ಧರ್ಮಾಬಾದ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಮಹಾರಾಷ್ಟ್ರ ಪೊಲೀಸರು, ನಾಯ್ಡು ಹಾಗೂ ಟಿಡಿಪಿ ಕಾರ್ಯಕರ್ತರನ್ನು ಬಂಧಿಸಿದ್ದರು.
ಮಹಾರಾಷ್ಟ್ರವು ತನ್ನ ಪಾಲಿನ ನೀರಿಗಿಂತ ಹೆಚ್ಚು ಕಬಳಿಸುತ್ತಿದ್ದು, ಇದರಿಂದಾಗಿ ಆಂಧ್ರಪ್ರದೇಶದ ತೆಲಂಗಾಣ ಪ್ರಾಂತ್ಯದ ರೈತರ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಇದನ್ನು ತಡೆಯಲು ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಅದಕ್ಕಾಗಿ ಜೀವ ಕೊಡಲೂ ಸಿದ್ಧ ಎಂದು ನಾಯ್ಡು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT