ಸುಪ್ರೀಂ ಕೋರ್ಟ್ 
ದೇಶ

ವರದಕ್ಷಿಣೆ ದೂರು: 'ಸಿಟ್ಟು' ಹಾಗೂ 'ಸೇಡಿನ' ಉದ್ದೇಶದಿಂದ ಕಾನೂನು ದುರ್ಬಳಕೆ ಸಲ್ಲದು ಎಂದ ಸುಪ್ರೀಂ

ವರದಕ್ಷಿಣೆ ಪ್ರಕರಣಕ್ಕೆ ಸಂಬಂಧಿಸಿ ತಕ್ಷಣ ಬಂಧನ ಮಾಡಬಾರದೆನ್ನುವ ತನ್ನ ಹಿಂದಿನ ತೀರ್ಪನ್ನು ಮಾರ್ಪಾಡುಗೊಳಿಸಿ ಶುಕ್ರವಾರ ಆದೇಶಿಸಿದ್ದ ಸುಪ್ರೀಂ ಕೋರ್ಟ್ ಇಂದು....

ನವದೆಹಲಿ: ವರದಕ್ಷಿಣೆ ಪ್ರಕರಣಕ್ಕೆ ಸಂಬಂಧಿಸಿ ತಕ್ಷಣ ಬಂಧನ ಮಾಡಬಾರದೆನ್ನುವ ತನ್ನ ಹಿಂದಿನ ತೀರ್ಪನ್ನು ಮಾರ್ಪಾಡುಗೊಳಿಸಿ ಶುಕ್ರವಾರ ಆದೇಶಿಸಿದ್ದ ಸುಪ್ರೀಂ ಕೋರ್ಟ್ ಇಂದು (ಶನಿವಾರ) "ಸಿಟ್ಟು" ಹಾಗೂ "ಸೇಡ"ನ್ನು ಹಿನ್ನೆಲೆಯಾಗಿಟ್ಟುಕೊಂಡು ತಾನು ನೀಡಿದ ತೀರ್ಪನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುವಂತಿಲ್ಲ ಎಂದು ಎಚ್ಚರಿಸಿದೆ.
ಎಂತಹಾ ಪರಿಸ್ಥಿತಿಯಲ್ಲಿಯೂ ನ್ಯಾಯಾಲಯಗಳು ತಮ್ಮ ಕಣ್ಣು, ಕಿವಿಗಳನ್ನು ಸದಾ ತೆರೆದಿಡಲಿವೆ. ಸಂತ್ರಸ್ಥರ ಹೆಸರಲ್ಲಿ ಅನುಕಂಪ ಗಿತ್ಟಿಸಿಕೊಂಡು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವುದಕ್ಕೆ ಅವಕಾಶವಿಲ್ಲ ಎಂದು ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ಮತ್ತು ಡಿ.ಯು.ಚಂದ್ರಚೂಡ್  ಅವರನ್ನೊಳಗೊಂಡ ಪೀಠ ಹೇಳಿದೆ.
ವಿವಾಹಿತ ಸ್ತ್ರೀ ಮೇಲೆ ನಡೆಯುವ ದೌರ್ಜನ್ಯ ತಡೆಗಾಗಿ 1983ರಲ್ಲಿಯೇ ಐಪಿಸಿ ಸೆಕ್ಷನ್ 498ಎ ಅನ್ನು ಅನುಷ್ಠಾನಗೊಳಿಸಲಾಗಿದೆ. ಅದರೆ ಮಹಿಳೆ ಹಾಗೂ ಅವರ ಕಡೆಯವರು ಈ ಕಾನೂನನ್ನು ದುರ್ಬಳಕೆ ಮಾಡಿಕೊಂಡು ಗಂಡಂದಿರ ಮೇಲೆ ಕೌಟುಂಬಿಕ ದೌರ್ಜನ್ಯ ತಡೆಯುವುದಕ್ಕೆ ಹಾಗೂ ಪುರುಷರಿಗೆ ರಕ್ಷಣೆ ಒದಗಿಸಲು ಹೊಸ ಕಾನೂನು ಅಗತ್ಯವಿದೆ. ಸೆಕ್ಷನ್ 498ಎ ಅಡಿಯಲ್ಲಿನ "ಕಿರುಕುಳ" ಎನ್ನುವ ಶಬ್ದ ಅತ್ಯಂತ ಸೂಕ್ಷ್ಮ ಪದವಾಗಿದ್ದು ಪೋಲೀಸರ ಉತ್ಪ್ರೇಕ್ಷೆಯ ಕಾರಣದಿಂದ ವಿನಾಕಾರಣ ಗಂಡಂದಿರು ಜೈಲುಪಾಲಾಗುವ ಸಾಧ್ಯತೆ ಇದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
ಹೀಗಾಗಿ ಕಾನೂನು ದುರ್ಬಳಕೆ ಆಗದಂತೆ ಸೂಕ್ತ "ಸಂರಕ್ಷಣಾ ಕ್ರಮ" ಗಳನ್ನು ಜಾರಿಗೆ ತರಬೇಕೆಂದು ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT