ಸೇನಾ ಯೋಧ ಉಗ್ರಗಾಮಿಯ ಮೃತದೇಹವನ್ನು ಎಳೆದುಕೊಂಡು ಹೋಗುತ್ತಿರುವ ದೃಶ್ಯ(ಫೋಟೋ ಟ್ವಿಟ್ಟರ್) 
ದೇಶ

ಉಗ್ರನನ್ನು ಕೊಂದು ರಸ್ತೆಯಲ್ಲಿ ಎಳೆದುಕೊಂಡು ಹೋದ ಯೋಧ; ಫೋಟೋ ವೈರಲ್, ವ್ಯಾಪಕ ಖಂಡನೆ

ಸೇನಾ ಯೋಧರೊಬ್ಬರು ಕಳೆದ ಗುರುವಾರ ಎನ್ ಕೌಂಟರ್ ನಲ್ಲಿ ಮೃತಪಟ್ಟ ಉಗ್ರನ ಮೃತದೇಹವನ್ನು ...

ಶ್ರೀನಗರ: ಸೇನಾ ಯೋಧರೊಬ್ಬರು ಕಳೆದ ಗುರುವಾರ ಎನ್ ಕೌಂಟರ್ ನಲ್ಲಿ ಮೃತಪಟ್ಟ ಉಗ್ರನ ಮೃತದೇಹವನ್ನು ರಸ್ತೆಯಲ್ಲಿ ಎಳೆದುಕೊಂಡು ಹೋದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದೊಂದು ಅನಾಗರಿಕ ಹೇಯ ಕೃತ್ಯ ಎಂದು ಮಾನವ ಹಕ್ಕು ಹೋರಾಟಗಾರರು ಟೀಕಿಸಿದ್ದಾರೆ.

ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯ ಕತ್ರಾದ ರಸ್ತೆಯಲ್ಲಿ ಗುಂಡಿನ ಚಕಮಕಿಯಲ್ಲಿ ಕೊಂದ ಉಗ್ರನ ಶವದ ಕಾಲಿಗೆ ಚೈನ್ ನಿಂದ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋದ ಚಿತ್ರವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಅದು ವೈರಲ್ ಆಗಿದೆ.

ಜಮ್ಮು ಪ್ರಾಂತ್ಯದ ರಿಯಾಸಿ ಜಿಲ್ಲೆಯ ಧಿರಿತಿ ಗ್ರಾಮದಲ್ಲಿ ಕಳೆದ ಗುರುವಾರ ಭದ್ರತಾ ಪಡೆ ಯೋಧರು ಮತ್ತು ಉಗ್ರರ ನಡುವೆ ಸುಮಾರು 7 ಗಂಟೆಗಳಿಗೂ ಅಧಿಕ ಕಾಲ ಗುಂಡಿನ ಚಕಮಕಿ ನಡೆಯಿತು. ಇದರಲ್ಲಿ ಜೈಶ್ ಇ ಮೊಹಮ್ಮದ್ ಸಂಘಟನೆಯ ಮೂವರು ಉಗ್ರಗಾಮಿಗಳು ಹತರಾಗಿದ್ದರು. ಗುಂಡಿನ ದಾಳಿಯಲ್ಲಿ ಮೂವರು ಅಧಿಕಾರಿಗಳು ಸೇರಿದಂತೆ ಕನಿಷ್ಠ 12 ಭದ್ರತಾ ಯೋಧರು ಗಾಯಗೊಂಡಿದ್ದಾರೆ.

ಕಳೆದ ಬುಧವಾರ ನಸುಕಿನ ಜಾವ ಸಾಂಬಾ ವಲಯದಲ್ಲಿ ಮೂವರು ಉಗ್ರರು ಒಳನುಸುಳಿ ಹೋಗಿದ್ದರು. ಈ ಸಂದರ್ಭದಲ್ಲಿ ಉಗ್ರರನ್ನು ಸದೆಬಡಿಯಲು ಭದ್ರತಾ ಪಡೆ ಯೋಧರು ಗುಂಡಿನ ದಾಳಿ ನಡೆಸಬೇಕಾಯಿತು. ಉಗ್ರರು ಜಜ್ಜರ್ ಕೊಟ್ಲಿ ಪ್ರದೇಶದಲ್ಲಿ ಪೊಲೀಸರೆಡೆಗೆ ಗುಂಡಿನ ಸುರಿಮಳೆಗೈಯಲಾರಂಭಿಸಿದರು. ಉಗ್ರರಿಗೆ ತಕ್ಕ ಪ್ರತ್ಯುತ್ತರ ನೀಡಿದ್ದ ಯೋಧರು ಮೂವರು ಉಗ್ರರನ್ನು ಸದೆಬಡಿದು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡರು.

ಯೋಧ ಉಗ್ರನ ಶವವನ್ನು ರಸ್ತೆಯಲ್ಲಿ ಎಳೆದುಕೊಂಡ ಹೋದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದು ಮೃತದೇಹಕ್ಕೆ ಗೌರವ ತೋರಿಸದಿರುವುದು ಕ್ರೂರ ಅನಾಗರಿಕ ವರ್ತನೆ ಎಂದು ಮಾನವ ಹಕ್ಕುಗಳ ಹೋರಾಟಗಾರ ಖುರ್ರಮ್ ಪರ್ವೇಜ್ ಟೀಕಿಸಿದ್ದಾರೆ. ಭಾರತೀಯ ಸೇನೆಯ ಮಾನವ ಹಕ್ಕುಗಳ ನಡವಳಿಕೆಯನ್ನು ಇದು ತೋರಿಸುತ್ತದೆ ಎಂದಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆ ಪಡೆಯಲು ಜಮ್ಮುವಿನ ರಕ್ಷಣಾ ಇಲಾಖೆ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ಸಂಪರ್ಕಕ್ಕೆ ಸಿಗಲಿಲ್ಲ. ಇನ್ನು ರಕ್ಷಣಾ ಇಲಾಖೆ ವಿಶ್ಲೇಷಕ ಮತ್ತು ಟಿವಿ ನಿರೂಪಕ ಮೇಜರ್ ಗೌರವ್ ಆರ್ಯ ಸೇನಾ ಯೋಧರ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಕಾಶ್ಮೀರದ ಪತ್ರಕರ್ತ ಅಹ್ಮದ್ ಅಲಿ ಫಯಾಝ್ ಕೂಡ ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾನೂನು, ಅಂತಾರಾಷ್ಟ್ರೀಯ ಶಿಷ್ಟಾಚಾರಗಳು ಸೇನಾ ಯೋಧ ಉಗ್ರಗಾಮಿಯ ಶವವನ್ನು ಈ ರೀತಿ ಎಳೆದುಕೊಂಡು ಹೋಗಲು ಅವಕಾಶ ನೀಡುವುದಿಲ್ಲ. ಸೇನಾಪಡೆಯ ಇಂತಹ ನಡವಳಿಕೆಗಳಿಂದಾಗಿ ಒಬ್ಬ ಉಗ್ರನನ್ನು ಕೊಂದರೆ ಮತ್ತೆ ಇಬ್ಬರು ಉಗ್ರರು ಹುಟ್ಟಿಕೊಳ್ಳುತ್ತಾರೆ. ಇದು ಹೀಗೆಯೇ ಮುಂದುವರಿಯುತ್ತಾ ಹೋಗುತ್ತದೆ. ಇದು ಕಾನೂನು ಬಾಹಿರ ಮತ್ತು ಖಂಡನೀಯ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?