ಸಂಗ್ರಹ ಚಿತ್ರ 
ದೇಶ

ಛತ್ತೀಸ್ ಗಢ: ತ್ಯಾಜ್ಯ ಗುಂಡಿಗೆ ಇಳಿದ ಐವರು ಉಸಿರುಗಟ್ಟಿ ಸಾವು

ಮನೆಯೊಂದರ ತ್ಯಾಜ್ಯ ಗುಂಡಿ ಸ್ವಚ್ಚಗೊಳಿಸುವ ಸಲುವಾಗಿ ಇಳಿದ ಐವರು ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಛತ್ತೀಸ್ ಗಢ, ಜಶ್ ಪುರ್ ಜಿಲ್ಲೆಯಲ್ಲಿ ನಡೆದಿದೆ.

ರಾಯ್ಪುರ್: ಮನೆಯೊಂದರ ತ್ಯಾಜ್ಯ ಗುಂಡಿ ಸ್ವಚ್ಚಗೊಳಿಸುವ ಸಲುವಾಗಿ ಇಳಿದ ಐವರು ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಛತ್ತೀಸ್ ಗಢ, ಜಶ್ ಪುರ್ ಜಿಲ್ಲೆಯಲ್ಲಿ ನಡೆದಿದೆ.
ಜಶ್ ಪುರದ ಪಂಡ್ರಿಪಾನಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಮನೆಯ ಯಜಮಾನಿ ಹಾಗೂ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೋಲೀಸರು ತಿಳಿಸಿದರು.
ಸಾವಿತ್ರಿ (45), ಬದು ಟಾಮ್ (60), ಪರಮಜೀತ್ ಪೈಕ್ರಾ (19), ರಾಮ್ ಜೀವನ್ ರಾಮ್ 35) ಮತ್ತು ಈಶ್ವರ ಸಾಯಿ (40)  ಮೃತರೆಂದು ಗುರುತಿಸಲಾಗಿದೆ. 
ತ್ಯಾಜ್ಯ ಗುಂಡಿಗಿಳಿದ ಐವರಲ್ಲಿ ಯಾರೂ ಮೇಲೆ ಬಂದಿರಲಿಲ್ಲ, ಇದನ್ನು ಗ್ರಾಮದ ಮಗು ಒಂದು ಗಮನಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಗುಂಡಿಯಲ್ಲಿ ಸಿಕ್ಕಿದ್ದ ಐವರನ್ನೂ ಮೇಲೆತ್ತಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವ ವೇಳೆಗಾಗಲೇ ಎಲ್ಲರೂ ಮೃತರಾಗಿದ್ದರೆಂದು ಅವರ ಪರೀಕ್ಷೆ ನಡೆಸಿದ ವೈದ್ಯರು ಖಚಿತಪಡಿಸಿದರು.
ಅವರೆಲ್ಲರೂ ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದಿದೆ, ಇನ್ನು ಮರಣೋತ್ತರ ಪರೀಕ್ಷೆ ವರದಿ ಬಳಿಕ ಸಾವಿನ ನಿಖರ ಕಾರಣ ಪತ್ತೆಯಾಗಲಿದೆ ಎಂದು ಪೋಲೀಸರು ವಿವರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT