ಪಿವಿ ನರಸಿಂಹ ರಾವ್ - ಕರುಣಾಕರನ್ 
ದೇಶ

ಇಸ್ರೋ ಬೇಹುಗಾರಿಕೆ ಪ್ರಕರಣ: ಪಿವಿ ನರಸಿಂಹ ರಾವ್ ನನ್ನ ತಂದೆಗೆ ಮೋಸ ಮಾಡಿದ್ದರು- ಕರುಣಾಕರನ್ ಪುತ್ರ

ಇಸ್ರೋ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೇರಳ ಮಾಜಿ ಸಿಎಂ ಕರುಣಾಕರನ್ ಪುತ್ರ ಮುರಳೀಧರನ್, ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ನಮ್ಮ ತಂದೆಗೆ ಮೋಸ

ಇಸ್ರೋ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೇರಳ ಮಾಜಿ ಸಿಎಂ ಕರುಣಾಕರನ್ ಪುತ್ರ ಮುರಳೀಧರನ್, ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ನಮ್ಮ ತಂದೆಗೆ ಮೋಸ ಮಾಡಿದ್ದರು ಎಂದು ಆರೋಪಿಸಿದ್ದಾರೆ. 
"1994 ರ ಇಸ್ರೋ ಬೇಹುಗಾರಿಕೆ ಪ್ರಕರಣದ ನಂತರದ ದಿನಗಳಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಪಿವಿ ನರಸಿಂಹ ರಾವ್ ಅವರು ನನ್ನ ತಂದೆ ಕರುಣಾಕರನ್ ಗೆ ಮೋಸ ಮಾಡಿದ್ದರು. ನನ್ನ ತಂದೆ ಹೇಳಿರುವ ಪ್ರಕಾರ, ಪಿವಿ ನರಸಿಂಹ ರಾವ್ ಅವರ ಅಂದಿನ ನಡೆಯ  ಬಗ್ಗೆ ಅವರಿಗೆ ಬೇಸರವಿತ್ತು. 1995 ರ ಮಾ.15 ರಂದು ನನ್ನ ತಂದೆಗೆ ಕರೆ ಮಾಡಿದ್ದ ಕಾಂಗ್ರೆಸ್ ನಾಯಕ ಜಿ.ಕೆ ಮೂಪನಾರ್ ಅವರು ನರಸಿಂಹ ರಾವ್ ಅವರ ಸೂಚನೆಯಂತೆ ರಾಜೀನಾಮೆ ನೀಡುವಂತೆ ಸಲಹೆ ನೀಡಿದ್ದರು. ಅದರಂತೆಯೇ ನನ್ನ ತಂದೆ ಕರುಣಾಕರನ್ ರಾಜೀನಾಮೆಯನ್ನೂ ನೀಡಿದ್ದರು.
ಕೇರಳದಲ್ಲಿ ಯಾರೂ ಸಹ ಅಂದಿನ ಸಿಎಂ ಕರುಣಾಕರನ್ ಅವರ ರಾಜೀನಾಮೆಯನ್ನು ಕೇಳಿರಲಿಲ್ಲ.  ಆದರೆ ಗುಂಪುಗಾರಿಕೆಯ ದ್ವೇಷದ ರಾಜಕಾರಣದಿಂದ ಕರುಣಾಕರನ್ ರಾಜೀನಾಮೆ ನೀಡಬೇಕಾಯಿತು ಎಂದು ಮುರಳೀಧರನ್ ಹೇಳಿದ್ದಾರೆ. ಒಂದು ವೇಳೆ ನರಸಿಂಹ ರಾವ್ ಅವರಿಲ್ಲದೇ ನೆಹರು-ಗಾಂಧಿ ಕುಟುಂಬದವರು ಕಾಂಗ್ರೆಸ್ ನೇತೃತ್ವ ವಹಿಸಿದ್ದರೆ ಕರುಣಾಕರನ್ ಸಿಎಂ ಸ್ಥಾನ ಕಳೆದುಕೊಳ್ಳುತ್ತಿರಲಿಲ್ಲ ಎಂದು ಮುರಳೀಧರನ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT