ಸುಬ್ರಮಣಿಯನ್ ಸ್ವಾಮಿ 
ದೇಶ

ತಮಿಳರಂತೆ ಕನ್ನಡಿಗರು ಸಹ 'ಮೂರ್ಖರು', ಸುಬ್ರಮಣಿಯನ್ ಸ್ವಾಮಿ ಹೇಳಿಕೆಗೆ ತೀವ್ರ ಆಕ್ರೋಶ!

ಹಿಂದಿ ಭಾಷೆಯನ್ನು ವಿರೋಧಿಸುವ ಮೂಲಕ ಕನ್ನಡಪರ ಹೋರಾಟಗಾರರು ತಮಿಳರಂತೆ ಮೂರ್ಖರು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ...

ಬೆಂಗಳೂರು: ಹಿಂದಿ ಭಾಷೆಯನ್ನು ವಿರೋಧಿಸುವ ಮೂಲಕ ಕನ್ನಡಪರ ಹೋರಾಟಗಾರರು ತಮಿಳರಂತೆ ಮೂರ್ಖರು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಹಿಂದಿ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಹಿಂದಿ ಕೂಡ ಒಂದು ಭಾಷೆ. ಹಿಂದಿ ಬೆಳೆಯುವುದರಿಂದ ಕನ್ನಡ ಕೆಳಗೆ ಇಳಿಯುತ್ತದೆ ಎಂಬ ಭಾವನೆ ಬೇಕಿಲ್ಲ. ಹಿಂದಿ ಭಾಷೆ ವಿರೋಧಿಸುವವರು ತಮಿಳುನಾಡಿನ ಜನರಂತೆ ಮೂರ್ಖರು, ತಮಿಳರು ಮಾಡಿದಂತೆ ಕನ್ನಡಿಗರು ಮಾಡುತ್ತಿದ್ದಾರೆ ಎಂದರು. 
ಹಿಂದಿ ಭಾಷೆಯನ್ನು ವಿರೋಧಿಸಿ ತಮಿಳಿಗರು ಇಂದು ಉದ್ಯೋಗಾವಕಾಶ ಇಲ್ಲದೆ ಬಳಲುತ್ತಿದ್ದಾರೆ. ಇನ್ನು ದೇಶಾದ್ಯಂತ ತಿರುಗಾಡಲಾಗದ ಸ್ಥಿತಿಯಲ್ಲಿದ್ದಾರೆ. ತಮಿಳುನಾಡಿನ ಜನರು ಮಾಡಿದ ಮೂರ್ಖ ಕೆಲಸವನ್ನು ಕನ್ನಡಿಗರು ಮಾಡದಿರಲಿ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದರು. 
ಸುಬ್ರಮಣಿಯನ್ ಸ್ವಾಮಿ ಹೇಳಿಕೆಯನ್ನು ಖಂಡಿಸಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರು ಸುಬ್ರಮಣಿಯನ್ ಸ್ವಾಮಿ ಅವರು ಮಾನಸಿಕ ಸೀಮಿತ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT