ಸುಬ್ರಮಣಿಯನ್ ಸ್ವಾಮಿ 
ದೇಶ

ತಮಿಳರಂತೆ ಕನ್ನಡಿಗರು ಸಹ 'ಮೂರ್ಖರು', ಸುಬ್ರಮಣಿಯನ್ ಸ್ವಾಮಿ ಹೇಳಿಕೆಗೆ ತೀವ್ರ ಆಕ್ರೋಶ!

ಹಿಂದಿ ಭಾಷೆಯನ್ನು ವಿರೋಧಿಸುವ ಮೂಲಕ ಕನ್ನಡಪರ ಹೋರಾಟಗಾರರು ತಮಿಳರಂತೆ ಮೂರ್ಖರು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ...

ಬೆಂಗಳೂರು: ಹಿಂದಿ ಭಾಷೆಯನ್ನು ವಿರೋಧಿಸುವ ಮೂಲಕ ಕನ್ನಡಪರ ಹೋರಾಟಗಾರರು ತಮಿಳರಂತೆ ಮೂರ್ಖರು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಹಿಂದಿ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನದಲ್ಲಿ ಹಿಂದಿ ಕೂಡ ಒಂದು ಭಾಷೆ. ಹಿಂದಿ ಬೆಳೆಯುವುದರಿಂದ ಕನ್ನಡ ಕೆಳಗೆ ಇಳಿಯುತ್ತದೆ ಎಂಬ ಭಾವನೆ ಬೇಕಿಲ್ಲ. ಹಿಂದಿ ಭಾಷೆ ವಿರೋಧಿಸುವವರು ತಮಿಳುನಾಡಿನ ಜನರಂತೆ ಮೂರ್ಖರು, ತಮಿಳರು ಮಾಡಿದಂತೆ ಕನ್ನಡಿಗರು ಮಾಡುತ್ತಿದ್ದಾರೆ ಎಂದರು. 
ಹಿಂದಿ ಭಾಷೆಯನ್ನು ವಿರೋಧಿಸಿ ತಮಿಳಿಗರು ಇಂದು ಉದ್ಯೋಗಾವಕಾಶ ಇಲ್ಲದೆ ಬಳಲುತ್ತಿದ್ದಾರೆ. ಇನ್ನು ದೇಶಾದ್ಯಂತ ತಿರುಗಾಡಲಾಗದ ಸ್ಥಿತಿಯಲ್ಲಿದ್ದಾರೆ. ತಮಿಳುನಾಡಿನ ಜನರು ಮಾಡಿದ ಮೂರ್ಖ ಕೆಲಸವನ್ನು ಕನ್ನಡಿಗರು ಮಾಡದಿರಲಿ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದರು. 
ಸುಬ್ರಮಣಿಯನ್ ಸ್ವಾಮಿ ಹೇಳಿಕೆಯನ್ನು ಖಂಡಿಸಿರುವ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರು ಸುಬ್ರಮಣಿಯನ್ ಸ್ವಾಮಿ ಅವರು ಮಾನಸಿಕ ಸೀಮಿತ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ