ಪಾಕ್ ಗಡಿಯ ಸ್ಮಾರ್ಟ್ ಬೇಲಿಗೆ ಗೃಹ ಸಚಿವ ರಾಜನಾಥ್ ಸಿಂಗ್ ಚಾಲನೆ 
ದೇಶ

ಪಾಕ್ ಗಡಿಯ ಸ್ಮಾರ್ಟ್ ಬೇಲಿಗೆ ಗೃಹ ಸಚಿವ ರಾಜನಾಥ್ ಸಿಂಗ್ ಚಾಲನೆ

ಗಡಿಯಲ್ಲಿ ಉಗ್ರರ ಒಳನುಸುಳುವಿಕೆಗೆ ಸಂಪೂರ್ಣವಾಗಿ ಕಡಿವಾಣ ಹಾಕುವ ಉದ್ದೇಶದೊಂದಿಗೆ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸುತ್ತಿರುವ ದೇಶದ ಮೊದಲ 'ಸ್ಮಾರ್ಟ್ ಬೇಲೆ'ಯನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಉದ್ಘಾಟಿಸಿದ್ದಾರೆ...

ನವದೆಹಲಿ: ಗಡಿಯಲ್ಲಿ ಉಗ್ರರ ಒಳನುಸುಳುವಿಕೆಗೆ ಸಂಪೂರ್ಣವಾಗಿ ಕಡಿವಾಣ ಹಾಕುವ ಉದ್ದೇಶದೊಂದಿಗೆ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸುತ್ತಿರುವ ದೇಶದ ಮೊದಲ 'ಸ್ಮಾರ್ಟ್ ಬೇಲೆ'ಯನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಉದ್ಘಾಟಿಸಿದ್ದಾರೆ. 
ಭಾರತ-ಪಾಕಿಸ್ತಾನ ಗಡಿಯಲ್ಲಿನ ತಲಾ 5 ಕಿ.ಮೀ ಉದ್ದದ 2 ಬೇಲಿಗಳನ್ನು ರಾಜನಾಥ್ ಸಿಂಗ್ ಅವರು ಲೋಕಾರ್ಪಣೆಗೊಳಿಸಿದ್ದಾರೆ.
ಜಮ್ಮು ಗಡಿಯ ಮುಂಚೂಣಿ ಪ್ರದೇಶಕ್ಕೆ ತೆರಳಿದ ರಾಜನಾಥ್ ಸಿಂಗ್ ಅವರಿಗೆ ಗಡಿ ಭದ್ರತಾ ಪಡೆ (ಬಿಎಸ್ಎಫ್) ಅಧಿಕಾರಿಗಳು ಸ್ಮಾರ್ಟ್ ಬೇಲಿಯ ಕಾರ್ಯನಿರ್ವಹಣೆ ಕುರಿತಂತೆ ಪ್ರಾತ್ಯಕ್ಷಿಕೆ ನೀಡಿದರು. 
5 ಕಿ.ಮೀ ಉದ್ದದ ಎರಡು ಸ್ಮಾರ್ಟ್ ಬೇಲಿಗಳ ಪೈಕಿ ಒಂದನ್ನು ಸ್ಲೊವೇನಿಯಾದ ಕಂಪನಿ, ಮತ್ತೊಂದನ್ನು ಭಾರತೀಯ ಕಂಪನಿ ಅಭಿವೃದ್ಧಿ ಪಡಿಸಿವೆ. 
ಏನಿದು ಸ್ಮಾರ್ಟ್ ಬೇಲಿ, ಇದರ ಕಾರ್ಯನಿರ್ವಹಣೆ ಹೇಗಿರುತ್ತದೆ? 
ಇದೊಂದು ತಂತ್ರಜ್ಞಾನ ಆಧರಿತ ಕಣ್ಗಾವಲು ವ್ಯವಸ್ಥೆಯಾಗಿದೆ. ಪ್ರಸ್ತುತ ಭಾರತ-ಪಾಕಿಸ್ತಾನ ಗಡಿಯಲ್ಲಿ ನೂರಾರು ಕಿ.ಮೀ ಉದ್ದಕ್ಕೆ ತಂತಿ ಬೇಲಿ ಇದೆ. ಹಿಮಪಾತ ಮತ್ತಿತರೆ ನೈಸರ್ಗಿಕ ಕಾರಣಗಳಿಂದಾಗಿ ಆ ಬೇಲಿ ಸವೆಯುತ್ತದೆ. ಇದಕ್ಕಾಗಿ ನಿರ್ವಹಣಾ ವೆಚ್ಚ ಭರಿಸಬೇಕಾಗುತ್ತದೆ. ಜೊತೆಗೆ ಈ ಬೇಲಿಯ ಮೂಲಕ ಗಡಿಯೊಳಕ್ಕೆ ನುಸುಳುವುದನ್ನು ಉಗ್ರರು ಕರಗತ ಮಾಡಿಕೊಂಡಿದ್ದಾರೆ. ಹೀಗಾಗಿ ಗಡಿಯಲ್ಲಿ ಮಳೆ, ಚಳಿ, ಗಾಳಿ, ಬಿರುಗಾಳಿ, ಹಿಮಪಾತ ಎನ್ನದೇ ಸರ್ವಋತುಗಳಲ್ಲೂ ಕಣ್ಗಾವಲು ಇಡಲು ಭಾರತ ಕಂಡುಕೊಂಡಿರುವ ವ್ಯವಸ್ಥೆಯೇ ಸ್ಮಾರ್ಟ್ ಫೆನ್ಸ್ ಅರ್ಥಾತ್ ಬೇಲಿ. 
ಸರ್ವೇಕ್ಷಣೆ, ಸಂಪರ್ಕ ಹಾಗೂ ದತ್ತಾಂಶ ಸಂಗ್ರಹಕ್ಕೆ ಬೇಕಾದ ಉಪಕರಣಗಳು ಇಲ್ಲಿ ಬಳಕೆಯಾಗಲಿವೆ. ರಾತ್ರಿ ಹೊತ್ತು ವ್ಯಕ್ತಿಗಳ ಚಲನವಲನ ಗುರುತಿಸುವ ಧರ್ಮಲ್ ಇಮೇಜರ್, ಭೂಗತ ಸೆನ್ಸರ್ ಗಳು, ಫೈಬರ್ ಆಪ್ಟಿಕಲ್ ಸೆನ್ಸರ್ ಗಳು, ರಾಡಾರ್, ಸೋನಾರ್ ನಂತಹ ಉಪಕರಣಗಳನ್ನು ಗಡಿಯಲ್ಲಿ ಕಂಬ, ಗೋಪುರ, ಗಾಳಿಯಲ್ಲಿ ತೇಲುವ ಏರೋ ಸ್ಟಾಟ್ ಗಳಿಗೆ ಅಳವಡಿಕೆ ಮಾಡಲಾಗುತ್ತದೆ. 
ಜೊತೆಗೆ ಸಿಸಿಟಿವಿ ನೇರ ಪ್ರಸಾರ ಬಿಎಸ್ಎಫ್ ನೆಲೆಗೆ ರವಾನೆಯಾಗಲಿದೆ. ಒಂದು ವೇಳೆ, ಬೇಲಿ ಬಳಿ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದರೆ, ನೇರವಾಗಿ ಬಿಎಸ್ಎಫ್ ನೆಲೆಗೆ ಗೊತ್ತಾಗಲಿದ್ದು. ತಕ್ಷಣವೇ ಯೋಧರು ಕಾರ್ಯಾಚರಣೆ ನಡೆಸಿ ಒಳನುಸುಳುವಿಕೆಯಂತಹ ಯತ್ನಗಳನ್ನು ವಿಫಲಗೊಳಿಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!