ಪೊನಗುಲೆತಿ ಶ್ರೀನಿವಾಸ್ ರೆಡ್ಡಿ 
ದೇಶ

ಕಮ್ಮಮ್ ಟಿಆರ್ ಎಸ್ ಸಂಸದರ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್)ಯ ಕಮ್ಮಮ್ ಸಂಸದ ಪೊನಗುಲೆತಿ ಶ್ರೀನಿವಾಸ್ ರೆಡ್ಡಿ...

ಹೈದರಾಬಾದ್: ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್)ಯ ಕಮ್ಮಮ್ ಸಂಸದ ಪೊನಗುಲೆತಿ ಶ್ರೀನಿವಾಸ್ ರೆಡ್ಡಿ ಅವರ ನಿವಾಸ ಮತ್ತು ಬ್ಯುಸಿನೆಸ್ ಕಚೇರಿಗಳ ಮೇಲೆ ಮಂಗಳವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲಿಸುತ್ತಿದ್ದಾರೆ.
ಶ್ರೀನಿವಾಸ್ ರೆಡ್ಡಿ ಅವರ ಹೈದರಾಬಾದ್ ಮತ್ತು ಕಮ್ಮಮ್ ನಿವಾಸ ಹಾಗೂ ಬಂಜಾರ ಹಿಲ್ಸ್ ನಲ್ಲಿರುವ ರಾಘವ ಕನ್ಸ್ಟ್ರಕ್ಸನ್ ನ ಮುಖ್ಯ ಕಚೇರಿ ಸೇರಿದಂತೆ 16 ಕಡೆ ಏಕ ಕಾಲಕ್ಕೆ ದಾಳಿ ನಡೆಸಲಾಗಿದೆ.
ಶ್ರೀನಿವಾಸ್ ರೆಡ್ಡಿ ಅವರ ಸಹೋದರ ಪೊನಗುಲೆತಿ ಪ್ರಸಾದ್ ರೆಡ್ಡಿ ಅವರು ರಾಘವ ಕನ್ಸ್ಟ್ರಕ್ಸನ್ ಅಧ್ಯಕ್ಷರಾಗಿದ್ದು, ಸಂಸದರ ಪತ್ನಿ, ಪುತ್ರ ಮತ್ತು ಪುತ್ರಿ ನಿರ್ದೇಶಕರಾಗಿದ್ದಾರೆ.
ಇಂದು ಬೆಳಗ್ಗೆ ಐಟಿ ಅಧಿಕಾರಿಗಳು ಟಿಆರ್ ಎಸ್ ಸಂಸದರ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಸಂಜೆಯವರೆಗೆ ದಾಳಿ ಮುಂದುವರೆಯುವ ಸಾಧ್ಯತೆ ಇದೆ.
ತೆಲಂಗಾಣ ವಿಧಾನಸಭೆ ಚುನಾವಣೆ ಎದುರಿಸುತ್ತಿರುವುದರಿಂದ ಟಿಆರ್ ಎಸ್ ಸಂಸದರ ಮೇಲಿನ ಐಟಿ ದಾಳಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT