ಮುಖ್ತಾರ್ ಅಹಮ್ಮದ್ ಮಲಿಕ್ 
ದೇಶ

ಹೇಡಿ ಉಗ್ರರ ನೀಚ ಕೃತ್ಯ: ಪತ್ರಕರ್ತರ ಸೋಗಿನಲ್ಲಿ ಬಂದು ಮಗನ ಮೃತದೇಹದ ಮುಂದೆ ಅಳುತ್ತಿದ್ದ ಯೋಧನಿಗೆ ಗುಂಡು!

ಪತ್ರಕರ್ತರ ಸೋಗಿನಲ್ಲಿ ಕಳೆದ ಸೋಮವಾರ ಟೆರಿಟೋರಿಯಲ್ ಆರ್ಮಿ(ಟಿಎ)ಯ ಯೋಧನ ಮನೆಗೆ ನುಗ್ಗಿದ ಉಗ್ರರು ನಿರಾಯುಧನಾಗಿದ್ದ ಯೋಧನನ್ನು ಹೊರಗೆಳೆದು...

ಶ್ರೀನಗರ: ಪತ್ರಕರ್ತರ ಸೋಗಿನಲ್ಲಿ ಕಳೆದ ಸೋಮವಾರ ಟೆರಿಟೋರಿಯಲ್ ಆರ್ಮಿ(ಟಿಎ)ಯ ಯೋಧನ ಮನೆಗೆ ನುಗ್ಗಿದ ಉಗ್ರರು ನಿರಾಯುಧನಾಗಿದ್ದ ಯೋಧನನ್ನು ಹೊರಗೆಳೆದು ಗುಂಡಿಟ್ಟು ಹತ್ಯೆ ಮಾಡಿ ನೀಚ ಕೃತ್ಯ ಎಸಗಿದ್ದರು. 
ಮೃತ ಯೋಧನನ್ನು ಮುಖ್ತಾರ್ ಅಹಮ್ಮದ್ ಮಲಿಕ್ ಅವರು ಮಗ ಸಾವಿನ ಸುದ್ದಿ ಕೇಳಿದ ಆಘಾತದಲ್ಲಿ ಮನೆಗೆ ಬಂದಿದ್ದರು. ಮಗನನ್ನು ಕಳೆದುಕೊಂಡ ಶೋಕದಲ್ಲಿದ್ದ ಯೋಧನ ಹತ್ಯೆ ಮಾಡುವ ಮೂಲಕ ಉಗ್ರರು ತಮ್ಮ ಪರಾಕ್ರಮ ಮೆರೆದಿದ್ದಾರೆ. 
ಮಲಿಕ್ ಪುತ್ರ ಕೆಲ ದಿನಗಳ ಹಿಂದೆ ಕುಲ್ಗಾಂನಲ್ಲಿ ನಡೆದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಮೂರು ದಿನಗಳ ಹಿಂದೆ ಮೃತಪಟ್ಟಿದ್ದ. ಇದರಿಂದಾಗಿ ಮಗನ ಅಂತ್ಯಕ್ರಿಯೆಗಾಗಿ ಮಲಿಕ್ ರಜೆಯಲ್ಲಿ ಮನೆಗೆ ಬಂದಿದ್ದರು. 
ಮಲಿಕ್ ರ ಕುಟುಂಬಸ್ಥರ ಪ್ರಕಾರ ಮನೆಗೆ ಬಂದಿದ್ದ ಮಲಿಕ್ ರನ್ನು ಭೇಟಿ ಮಾಡಬೇಕು ಎಂದು ಹೇಳಿಕೊಂಡು ಪತ್ರಕರ್ತರ ಸೋಗಿನಲ್ಲಿ ಉಗ್ರರು ಬಂದಿದ್ದರು. ಮನೆಯೊಳಗೆ ಹೋಗುತ್ತಿದ್ದಂತೆ ತಮ್ಮ ಬಳಿಯಿದ್ದ ಬಂದೂಕಿನಿಂದ ಮಲಿಕ್ ರನ್ನು ಪೈಂಟ್  ಬ್ಲಾಂಕ್ ನಲ್ಲಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!