ಪ್ರಧಾನಿ ನರೇಂದ್ರಮೋದಿ 
ದೇಶ

ಆಶಾ ಕಾರ್ಯಕರ್ತೆಯರಿಗೆ ನೆರವಿನ ಪ್ಯಾಕೇಜ್ :ಕೇಂದ್ರ ಸಂಪುಟ ಅನುಮೋದನೆ !

ಇದೇ ವರ್ಷದ ಅಕ್ಟೋಬರ್ ತಿಂಗಳಿನಿಂದ ಜಾರಿಗೆ ಬರುವಂತೆ ಆಶಾ ಕಾರ್ಯಕರ್ತೆಯರ ನೆರವಿನ ಪ್ಯಾಕೇಜ್ ಒದಗಿಸುವುದಕ್ಕೆ ಪ್ರಧಾನಿ ನರೇಂದ್ರಮೋದಿ ನೇತೃತ್ವದಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಮೇಲಿನ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ನವದೆಹಲಿ: ಇದೇ ವರ್ಷದ  ಅಕ್ಟೋಬರ್ ತಿಂಗಳಿನಿಂದ ಜಾರಿಗೆ ಬರುವಂತೆ ಆಶಾ ಕಾರ್ಯಕರ್ತೆಯರ  ನೆರವಿನ  ಪ್ಯಾಕೇಜ್ ಒದಗಿಸುವುದಕ್ಕೆ ಪ್ರಧಾನಿ ನರೇಂದ್ರಮೋದಿ ನೇತೃತ್ವದಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಮೇಲಿನ  ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ  ಅನುಮೋದನೆ ನೀಡಲಾಗಿದೆ.

2018-2020 ರ ಅವಧಿಗಾಗಿ  1224.97 ಕೋಟಿ ರೂ ವೆಚ್ಚದಲ್ಲಿ ನೆರವಿನ ಪ್ಯಾಕೇಜ್  ಒದಗಿಸುತ್ತಿದ್ದು, ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಇದನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ  ಆಶಾ ಕಾರ್ಯಕರ್ತೆಯರಿಗೆ  ತಿಂಗಳಿಗೆ ದೊರೆಯುತ್ತಿದ್ದ 1 ಸಾವಿರ ರೂ ಗೌರವಧನವನ್ನು  2 ಸಾವಿರ ರೂ. ಗೆ ಏರಿಕೆ ಮಾಡಲಾಗಿದೆ.  ಆಶಾ ಕಾರ್ಯಕರ್ತೆಯರಿಗೆ  ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷ ಭೀಮಾ ಯೋಜನೆಯಲ್ಲಿ ಸೇರ್ಪಡಿಸುವ ಹಾಗೂ ಹೆಚ್ಚಿನ ಸಂಖ್ಯೆಯ ಆಶಾ ಕಾರ್ಯಕರ್ತೆಯರ ನೋಂದಣಿಯ ಗುರಿ ಉದ್ದೇಶದೊಂದಿಗೆ ಪ್ಯಾಕೇಜ್ ನೀಡಲಾಗುತ್ತಿದೆ.

ಸಾಮಾಜಿಕ ಯೋಜನೆಗಳಿಗೆ ವಾರ್ಷಿಕ ಪ್ರೀಮಿಯಂಗಳು ಕೇಂದ್ರ ಸರ್ಕಾರದಿಂದ ಪಾವತಿಸಲ್ಪಡುತ್ತವೆ, ಆದರೆ ಆಶಾ ಯೋಜನೆಯು ಪ್ರಯೋಜನ ಪಡೆಯುವ ಲಾಭಗಳನ್ನು ಪಡೆದುಕೊಳ್ಳುತ್ತದೆ. ಇದರ ಜೊತೆಗೆ, ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಅನುಮೋದಿಸಲಾದ ಇತರ ಕಾರ್ಯ-ಆಧಾರಿತ ಪ್ರೋತ್ಸಾಹಕಗಳಿಗೆ ಹೆಚ್ಚುವರಿಯಾಗಿ ಮಾಸಿಕ ಪ್ರೋತ್ಸಾಹಕ ಹೆಚ್ಚಳವಾಗುತ್ತದೆ.

ಮುಂದಿನ ವರ್ಷದ ಮಾರ್ಚ್ 31 ರೊಳಗೆ ಶೇ. 65 ರಷ್ಟು ಹಾಗೂ  ಅಕ್ಟೋಬರ್ ತಿಂಗಳೊಳಗೆ ಶೇ.100 ರಷ್ಟು  ಆಶಾ ಕಾರ್ಯಕರ್ತೆಯರನ್ನು ಸಾಮಾಜಿಕ ಸುರಕ್ಷತಾ ಯೋಜನೆಯಡಿ ನೋಂದಾಯಿಸುವ ನಿಟ್ಟಿನಲ್ಲಿ  ಈ ಪ್ಯಾಕೇಜ್ ನೀಡಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT