ಮೋಹನ್ ಭಾಗವತ್ 
ದೇಶ

ಕಾನೂನು ಕೈಗೆತ್ತಿಕೊಳ್ಳುವುದು ಅಪರಾಧ: ಗೋ ರಕ್ಷಕರಿಗೆ ಭಾಗವತ್ ಎಚ್ಚರಿಕೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್ ) ಮುಖ್ಯಸ್ಥ ಮೋಹನ್ ಭಾಗವತ್ ಅವರು ಕಾನೂನು...

ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ ಎಸ್ ) ಮುಖ್ಯಸ್ಥ ಮೋಹನ್ ಭಾಗವತ್ ಅವರು ಕಾನೂನು ಕೈಗೆತ್ತಿಕೊಳ್ಳುವುದು ಅಪರಾಧ ಎಂದು ಹೇಳುವ ಮೂಲಕ ಪರೋಕ್ಷವಾಗಿ ಗೋ ರಕ್ಷಕರಿಗೆ ಬುಧವಾರ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ 'ಭವಿಷ್ಯದ ಭಾರತ: ಆರೆಸ್ಸೆಸ್‌ ದೃಷ್ಟಿಕೋನ' ವಿಚಾರದ ಕುರಿತು ಮೂರು ದಿನಗಳ ಉಪನ್ಯಾಸ ಮಾಲಿಕೆಯಲ್ಲಿ ಮಾತನಾಡಿದ ಭಾಗವತ್‌, ಅಂತರ್-ಜಾತಿ ವಿವಾಹಕ್ಕೆ ಆರ್ ಎಸ್ಎಸ್ ವಿರೋಧ ಇಲ್ಲ. ಅದು ಸಂಪೂರ್ಣ ಒಬ್ಬ ಪುರುಷ ಮತ್ತು ಮಹಿಳೆಗೆ ಸಂಬಂಧಿಸಿದ ವಿಚಾರ ಎಂದು ಹೇಳಿದ್ದಾರೆ.
ಅಂತರ್ ಜಾತಿ ವಿವಾಹ, ಶಿಕ್ಷಣ, ಗೋ ರಕ್ಷಕರ ಹಲ್ಲೆ ಪ್ರಕರಣಗಳ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಭಾಗವತ್, ಸಂಘ ಪರಿವಾರದವರೇ ಹೆಚ್ಚು ಅಂತರ್ - ಜಾತಿ ವಿವಾಹವಾಗಿದ್ದಾರೆ ಎಂದರು.
ಭಾರತಕ್ಕೆ ಹೊಸ ಶಿಕ್ಷಣ ನೀತಿಯ ಅಗತ್ಯ ಇದೆ. ಶಿಕ್ಷಣ ಸಂಸ್ಥೆಗಳು ಕೇವಲು ಪದವಿಗಳನ್ನು ಮಾತ್ರ ನೀಡುತ್ತಿವೆ. ಸಂಶೋಧನೆಗಳು ನಡೆಯುತ್ತಿಲ್ಲ ಎಂದು. ಅಲ್ಲದೆ ನಾವು ಇಂಗ್ಲಿಷ್ ಸೇರಿದಂತೆ ಯಾವುದೇ ಭಾಷೆಗೆ ವಿರೋಧ ವ್ಯಕ್ತಪಡಿಸಿಲ್ಲ. ನಮಗೆ ಪ್ರಾವಿಣ್ಯತೆ ಪಡೆದ ಭಾಷಣಕಾರರ ಅಗತ್ಯ ಇದೆ ಎಂದರು.
ಮಹಿಳೆಯರಿಗೆ ಸುರಕ್ಷಿತವಾದ ವಾತಾವರಣ ನಿರ್ಮಿಸಬೇಕಾಗಿದೆ ಎಂದು ಮೋಹನ್ ಭಾಗವತ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT