ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಬಿಎಸ್ಎಫ್ ಯೋಧನ ಕತ್ತು ಸೀಳಿ ಪಾಕಿಸ್ತಾನ ಪಡೆಗಳ ಉದ್ಘಟತನ; ಗಡಿಯಲ್ಲಿ ಕಟ್ಟೆಚ್ಚರ

ಜಮ್ಮು ಬಳಿಯ ಅಂತಾರಾಷ್ಟ್ರೀಯ ಗಡಿ ಬಳಿ ಬಿಎಸ್ ಎಫ್ ಯೋಧರೊಬ್ಬರ ಕತ್ತನ್ನು ಬರ್ಬರವಾಗಿ ಸೀಳಿ ಕ್ರೌರ್ಯ ಪ್ರದರ್ಶಿಸಿದ್ದಾರೆ. ಈ ಘಟನೆ ಉಭಯ ದೇಶಗಳ ನಡುವೆ ಆಕ್ರೋಶ ಭುಗಿಲೆಳುವಂತೆ ಮಾಡಿದೆ.

ಜಮ್ಮು: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ಸೈನಿಕರ ಪುಂಡಾಟಿಕೆ ಮಿತಿ ಮೀರಿದೆ. ಅಂತಾರಾಷ್ಟ್ರೀಯ ಗಡಿ ಪ್ರದೇಶದ ಬಳಿ  ಬಿಎಸ್ ಎಫ್ ಯೋಧರೊಬ್ಬರ ಕತ್ತನ್ನು ಬರ್ಬರವಾಗಿ  ಸೀಳಿ ಕ್ರೌರ್ಯ ಪ್ರದರ್ಶಿಸಿದ್ದಾರೆ.  ಈ ಘಟನೆ ಉಭಯ ದೇಶಗಳ ನಡುವೆ ಆಕ್ರೋಶ ಭುಗಿಲೆಳುವಂತೆ ಮಾಡಿದೆ.
ರಾಮಗಢ ಸೆಕ್ಟರ್ ನಲ್ಲಿ  ನಿನ್ನೆ ದಿನ ಈ ಹೀನ ಕೃತ್ಯ ನಡೆದಿದ್ದು, ಅಂತಾರಾಷ್ಟ್ರೀಯ ಗಡಿ ವಲಯ ಹಾಗೂ ಗಡಿ ನಿಯಂತ್ರಣ ರೇಖೆಯಲ್ಲೆಡೆ   ಹೈ ಆಲರ್ಟ್ ಘೋಷಿಸಲಾಗಿದೆ. ಗಡಿ ಭದ್ರತಾ ಪಡೆ ಪಾಕಿಸ್ತಾನ ವಲಯದ ಸಹವರ್ತಿ ಪಡೆಯ ವಿರುದ್ಧ ಬಲವಾದ ದೂರನ್ನು ದಾಖಲಿಸಿದೆ.
ಗಸ್ತಿನಲ್ಲಿದ್ದ ಹೆಡ್ ಕಾನ್ಸ್ ಟೇಬಲ್  ನರೇಂದರ್ ಕುಮಾರ್   ಅವರ ಕತ್ತು ಸೀಳಿರುವುದಲ್ಲದೇ,  ದೇಹಕ್ಕೆ ಮೂರು ಬುಲೆಟ್ ಗಾಯಗಳಾಗವೆ. ಆದರೆ, ಘಟನೆ ನಡೆದು ಆರು ತಾಸು ಕಳೆದರೂ ಪಾಕಿಸ್ತಾನ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿರಲಿಲ್ಲ.  ಬಿಎಸ್ ಎಫ್  ತಂಡದಿಂದ ಯಾವುದೇ ದಾಳಿ ನಡೆಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಪತ್ತೆಯಾಗಿದ್ದ ಯೋಧನ ಹುಡುಕಾಟ ನಡೆಸುತ್ತಿರಬೇಕಾದ್ದರೆ ಭಾರತದ ಬಿಎಸ್ ಎಫ್ ಯೋಧ ಕಂಡುಬಂದಿದ್ದು, ಈ ಪ್ರದೇಶದಲ್ಲಿ ಜಲ ವಿವಾದ ಏರ್ಪಟ್ಟಿದ್ದ ಹಿನ್ನೆಲೆಯಲ್ಲಿ ಸಮನ್ವಯ ಕ್ರಿಯೆಯಿಂದ ಆತನನ್ನು ಬರದಂತೆ ತಡೆಗಟ್ಟಲಾಗಿದೆ.ನಂತರ ಸೂರ್ಯಾಸ್ತವರೆಗೂ ಕಾಯ್ದು ಕಡು ಸಾಹಸದ ಮೂಲಕ ಪಾರ್ಥಿವ ಶರೀರವನ್ನು ಹೊರಗೆ ತರಲಾಗಿದೆ ಎಂದು ಪಾಕಿಸ್ತಾನದ ರೇಂಜರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT