ಸಂಗ್ರಹ ಚಿತ್ರ 
ದೇಶ

ಲೋಕಸಭೆ ಚುನಾವಣೆ: ಗುಜರಾತ್ ಗಾಂಧಿ ನಗರದಿಂದ ಎಲ್ ಕೆ ಅಡ್ವಾಣಿ ಸ್ಪರ್ಧೆ?

ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ರಾಜಕೀಯ ರಣತಂತ್ರ ಬದಲಾಗಿರುವಂತೆ ಕಾಣುತ್ತಿದ್ದು, ಈ ಹಿಂದೆ ಹಿರಿಯರಿಗೆ ಟಿಕೆಟ್ ಇಲ್ಲ ಎಂದು ಘೋಷಣೆ ಮಾಡಿದ್ದ ಬಿಜೆಪಿ ಇದೀಗ ಕಡಿಮೆ ಸ್ಥಾನದ ಭೀತಿಯಿಂದಿ ಹಿರಿಯರಿಗೂ ಟಿಕೆಟ್ ನೀಡಲು ಮುಂದಾಗಿದೆ.

ನವದೆಹಲಿ: ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ರಾಜಕೀಯ ರಣತಂತ್ರ ಬದಲಾಗಿರುವಂತೆ ಕಾಣುತ್ತಿದ್ದು, ಈ ಹಿಂದೆ ಹಿರಿಯರಿಗೆ ಟಿಕೆಟ್ ಇಲ್ಲ ಎಂದು ಘೋಷಣೆ ಮಾಡಿದ್ದ ಬಿಜೆಪಿ ಇದೀಗ ಕಡಿಮೆ ಸ್ಥಾನದ ಭೀತಿಯಿಂದಿ ಹಿರಿಯರಿಗೂ ಟಿಕೆಟ್ ನೀಡಲು ಮುಂದಾಗಿದೆ.
ಇದಕ್ಕೆ ಮೊದಲ ಹೆಜ್ಜೆ ಎಂಬಂತೆ ಬಿಜಿಪಿ ಹಿರಿಯ ಮುಖಂಡ ಹಾಗೂ ಮುತ್ಸದ್ಧಿ ನಾಯಕ ಎಲ್ ಕೆ ಅಡ್ವಾಣಿ ಅವರಿಗೆ ಟಿಕೆಟ್ ನೀಡಲು ಬಿಜೆಪಿ ನಿರ್ಧರಿಸಿದ್ದು, ಗುಜರಾತ್ ನ ಗಾಂಧಿನಗರದಿಂದ ಅಡ್ವಾಣಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇತ್ತೀಚೆಗೆ ನಡೆದ ಬಿಜೆಪಿ ಆಂತರಿಕ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದ್ದು. ತಮ್ಮ ಈ ಹಿಂದಿನ ಸ್ವಕ್ಷೇತ್ರ ಗಾಂಧಿನಗರದಿಂದಲೇ ಅಡ್ವಾಣಿ ಅವರನ್ನು ಕಣಕ್ಕಿಳಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.
ಈ ಬಗ್ಗೆ ನಿನ್ನೆ ಗುಜರಾತ್ ಮಾಜಿ ಸಿಎಂ ಶಂಕರ್ ಸಿಂಗ್ ವಘೇಲಾ ಅವರು ಮಾತನಾಡಿದ್ದು, ತಾವು ಎಲ್ ಕೆ ಅಡ್ವಾಣಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ. ಅಡ್ವಾಣಿ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ನಾನೂ ಕೂಡ ಬಿಜೆಪಿ ಪಕ್ಷದಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ವಘೇಲಾ ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT