ದೇಶ

ಜೆಟ್ ಏರ್ವೇಸ್'ನಲ್ಲಿ ತಾಂತ್ರಿಕ ದೋಷ ಪ್ರಕರಣ: ವರದಿ ಕೇಳಿದ ವಿಮಾನಯಾನ ಸಚಿವಾಲಯ

ವಿಮಾನ ಸಿಬ್ಬಂದಿಯ ಮಾಡಿದ ಅಚಾತುರ್ಯದಿಂದ ಜೆಟ್ ಏರ್ವೇಸ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷ ಪ್ರಕರಣ ಕುರಿತಂತೆ ವಿಮಾನಯಾನ ಸಚಿವಾಲಯ ಗುರುವಾರ ವರದಿ ಕೇಳಿದೆ...

ನವದೆಹಲಿ: ವಿಮಾನ ಸಿಬ್ಬಂದಿಯ ಮಾಡಿದ ಅಚಾತುರ್ಯದಿಂದ ಜೆಟ್ ಏರ್ವೇಸ್ ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷ ಪ್ರಕರಣ ಕುರಿತಂತೆ ವಿಮಾನಯಾನ ಸಚಿವಾಲಯ ಗುರುವಾರ ವರದಿ ಕೇಳಿದೆ. 
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವಾಲಯ ಘಟನೆ ವೇಳೆ ಕರ್ತವ್ಯದಲ್ಲಿದ್ದ ಎಲ್ಲಾ ಸಿಬ್ಬಂದಿಗಳು ಪ್ರಮುಖವಾಗಿ ವಿಮಾನದಲ್ಲಿದ್ದ ಸಿಬ್ಬಂದಿಗಳ ಕುರಿತಂತೆ, ಘಟನೆಯ ಸಂಪೂರ್ಣ ವರದಿಗಳನ್ನು ಸಲ್ಲಿಸುವಂತೆ ವಿಮಾನಯಾನ ಡಿಜಿಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 
ಈ ಹಿಂದೆ ಹೇಳಿಕೆ ನೀಡಿದ್ದ ಡಿಜಿಸಿಎ, ವಿಮಾನ ಅಪಘಾತ ತನಿಖಾ ದಳ (ಎಎಐಬಿ) ತನಿಖೆ ಆರಂಭಿಸಿದೆ ಎಂದು ಹೇಳಿತ್ತು. 
ಈ ನಡುವೆ ವಿಮಾನಯಾನ ಸಚಿವಾಲಯದ ಸಚಿವ ಸುರೇಶ್ ಪ್ರಭು ಅವರು, ಎಲ್ಲಾ ನಿಗದಿತ ಏರ್ಲೈನ್ಸ್ ಹಾಗೂ ವಿಮಾನ ನಿಲ್ದಾಣಗಳಲ್ಲಿ ಸುರಕ್ಷತಾ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT