ಸಂಗ್ರಹ ಚಿತ್ರ 
ದೇಶ

ಕಣಿವೆ ರಾಜ್ಯದಲ್ಲಿ ಉಗ್ರರಿಂದ ನಾಲ್ವರು ಪೊಲೀಸರ ಅಪಹರಣ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಹೆಚ್ಚಾಗಿದ್ದು. ಮತ್ತೆ ನಾಲ್ಕು ಮಂದಿ ಪೊಲೀಸರನ್ನು ಅಹಪರಣ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಹೆಚ್ಚಾಗಿದ್ದು. ಮತ್ತೆ ನಾಲ್ಕು ಮಂದಿ ಪೊಲೀಸರನ್ನು ಅಹಪರಣ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಗುರುವಾರ ರಾತ್ರಿ ದಕ್ಷಿಣ ಕಾಶ್ಮೀರದ ಶೋಪಿಯಾನ್ ನಲ್ಲಿ ಮೂರು ಮಂದಿ ವಿಶೇಷ ಪೊಲೀಸ್ ಅಧಿಕಾರಿಗಳನ್ನು ಹಾಗೂ ಓರ್ವ ಪೊಲೀಸ್ ಸಿಬ್ಬಂದಿಯನ್ನು ಶಂಕಿತ ಭಯೋತ್ಪಾದಕರು ಅಪಹರಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಭಯೋತ್ಪಾದಕರು ಪೊಲೀಸರಿಗೆ ಎಚ್ಚರಿಕೆ ನೀಡಿದ್ದು, ಅವರನ್ನು ವೃತ್ತಿಯಿಂದ ರಾಜೀನಾಮೆ ನೀಡುವಂತೆ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೂರು ವಾರಗಳಲ್ಲಿ ಕಾಶ್ಮೀರದಲ್ಲಿ ದಾಖಲಾಗಿರುವ 8ನೇ ಪ್ರಕರಣ ಇದಾಗಿದ್ದು, ಇಂದು ಮತ್ತೆ ನಾಲ್ಕು ಮಂದಿ ಪೊಲೀಸರನ್ನು ಉಗ್ರರು ಅಹಪರಣ ಮಾಡಿದ್ದಾರೆ. 
ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಮನಕ್ಕೆ ಸೇನೆ ಜತೆ ಪೊಲೀಸರು ಕೈಜೋಡಿಸಿರುವುದು ಭಯೋತ್ಪಾದಕರ ನಿದ್ದೆಗೆಡಿಸಿದೆ. ಹೀಗಾಗಿ ಉಗ್ರರು ಪೊಲೀಸರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ ಮುಸ್ಲಿಂ ಸಮುದಾಯದ ಪೊಲೀಸರನ್ನು ಸೇವೆಯಿಂದ ರಾಜೀನಾಮೆ ಪಡೆಯುವಂತೆ ಉಗ್ರರು ಬೆದರಿಕೆದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT