ಸಂಗ್ರಹ ಚಿತ್ರ 
ದೇಶ

ಕಣಿವೆ ರಾಜ್ಯದಲ್ಲಿ ಉಗ್ರರಿಂದ ನಾಲ್ವರು ಪೊಲೀಸರ ಅಪಹರಣ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಹೆಚ್ಚಾಗಿದ್ದು. ಮತ್ತೆ ನಾಲ್ಕು ಮಂದಿ ಪೊಲೀಸರನ್ನು ಅಹಪರಣ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಹೆಚ್ಚಾಗಿದ್ದು. ಮತ್ತೆ ನಾಲ್ಕು ಮಂದಿ ಪೊಲೀಸರನ್ನು ಅಹಪರಣ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಗುರುವಾರ ರಾತ್ರಿ ದಕ್ಷಿಣ ಕಾಶ್ಮೀರದ ಶೋಪಿಯಾನ್ ನಲ್ಲಿ ಮೂರು ಮಂದಿ ವಿಶೇಷ ಪೊಲೀಸ್ ಅಧಿಕಾರಿಗಳನ್ನು ಹಾಗೂ ಓರ್ವ ಪೊಲೀಸ್ ಸಿಬ್ಬಂದಿಯನ್ನು ಶಂಕಿತ ಭಯೋತ್ಪಾದಕರು ಅಪಹರಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಭಯೋತ್ಪಾದಕರು ಪೊಲೀಸರಿಗೆ ಎಚ್ಚರಿಕೆ ನೀಡಿದ್ದು, ಅವರನ್ನು ವೃತ್ತಿಯಿಂದ ರಾಜೀನಾಮೆ ನೀಡುವಂತೆ ಹೇಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೂರು ವಾರಗಳಲ್ಲಿ ಕಾಶ್ಮೀರದಲ್ಲಿ ದಾಖಲಾಗಿರುವ 8ನೇ ಪ್ರಕರಣ ಇದಾಗಿದ್ದು, ಇಂದು ಮತ್ತೆ ನಾಲ್ಕು ಮಂದಿ ಪೊಲೀಸರನ್ನು ಉಗ್ರರು ಅಹಪರಣ ಮಾಡಿದ್ದಾರೆ. 
ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಮನಕ್ಕೆ ಸೇನೆ ಜತೆ ಪೊಲೀಸರು ಕೈಜೋಡಿಸಿರುವುದು ಭಯೋತ್ಪಾದಕರ ನಿದ್ದೆಗೆಡಿಸಿದೆ. ಹೀಗಾಗಿ ಉಗ್ರರು ಪೊಲೀಸರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ ಮುಸ್ಲಿಂ ಸಮುದಾಯದ ಪೊಲೀಸರನ್ನು ಸೇವೆಯಿಂದ ರಾಜೀನಾಮೆ ಪಡೆಯುವಂತೆ ಉಗ್ರರು ಬೆದರಿಕೆದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ