ಉಗ್ರ ನಿಗ್ರಹ ಕಾರ್ಯಾಚರಣೆ 
ದೇಶ

ಬಂಡಿಪೋರಾದಲ್ಲಿ ಉಗ್ರರ ಹುಟ್ಟಡಗಿಸಿದ ಸೇನೆ, ಇಬ್ಬರು ಭಯೋತ್ಪಾದಕರು ಹತ!

ಬಂಡಿಪೋರಾದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಸೆದೆ ಬಡಿದಿದೆ.

ಶ್ರೀನಗರ: ಬಂಡಿಪೋರಾದಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಭಾರತೀಯ ಸೇನೆ ಇಬ್ಬರು ಉಗ್ರರನ್ನು ಸೆದೆ ಬಡಿದಿದೆ.
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿರುವಂತೆಯೇ ಇತ್ತ ಸೇನೆ ಕೂಡ ಉಗ್ರರಿಗೆ ದಿಟ್ಟ ಉತ್ತರ ನೀಡುತ್ತಿದ್ದು, ನಿನ್ನೆ ತಡರಾತ್ರಿಯಿಂದಲೂ ನಡೆಯುತ್ತಿರುವ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಹತರಾಗಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ನಿರ್ಣಾಯಕ ಘಟ್ಟ ತಲುಪಿದೆ.
ಇಂದು ಬೆಳಗ್ಗೆ ಬಂಡಿಪೋರಾದ ಸುಲ್ಮಾರ್ ಪ್ರದೇಶದಲ್ಲಿ ಅಡಗಿ ಕುಳಿತು ಸೇನೆ ಮೇಲೆ ದಾಳಿ ಮಾಡುತ್ತಿದ್ದ ಇಬ್ಬರು ಉಗ್ರರನ್ನು ಸೇನೆ ಗುಂಡಿಕ್ಕೆ ಹತ್ಯೆಗೈದಿದ್ದು, ಸ್ಥಳದಲ್ಲಿ ಮತ್ತಷ್ಟು ಉಗ್ರರು ಅವಿತಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಪ್ರಸ್ತುತ ಸುತ್ತಮುತ್ತಲ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಕಟ್ಟೆಚ್ಚರದಿಂದ ಇರುವಂತೆ ಸೂಚಿಸಲಾಗಿದೆ.
ಅಂತೆಯೇ ಸೇನಾಧಿಕಾರಿಗಳು ನೀಡಿರುವ ಮಾಹಿತಿಯನ್ವಯ ಉಗ್ರರ ಶವದ ಬಳಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT