ಸುಪ್ರೀಂ ಕೋರ್ಟ್ 
ದೇಶ

ನಾವೇನೂ 'ನರಭಕ್ಷಕ ಹುಲಿ'ಗಳಲ್ಲ: ಸುಪ್ರೀಂ ಕೋರ್ಟ್

ನಾವೇನೂ ನರಭಕ್ಷಕ ಹುಲಿಗಳಲ್ಲ ಒಂದು ಪ್ರಕರಣ ಸುಪ್ರೀಂ ಕೋರ್ಟ್ ಅಂಗಳದಲ್ಲಿ ವಿಚಾರಣೆಯಲ್ಲಿದೆ ಎಂದ ಮಾತ್ರಕ್ಕೆ ಸರ್ಕಾರಗಳು ಹೆದರಬಾರದು ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.

ನವದೆಹಲಿ: ನಾವೇನೂ ನರಭಕ್ಷಕ ಹುಲಿಗಳಲ್ಲ ಒಂದು ಪ್ರಕರಣ ಸುಪ್ರೀಂ ಕೋರ್ಟ್ ಅಂಗಳದಲ್ಲಿ ವಿಚಾರಣೆಯಲ್ಲಿದೆ ಎಂದ ಮಾತ್ರಕ್ಕೆ ಸರ್ಕಾರಗಳು ಹೆದರಬಾರದು ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.
"ನಾವೇನು ನರಭಕ್ಷಕ ಹುಲಿಗಳೋ, ಇನ್ನೊಂದೋ ಆಗಿಲ್ಲ, ಸರ್ಕಾರ ನಮಗೆ ಹೆದರಬಾರದು" ಎಂದು ನ್ಯಾಯಮೂರ್ತಿಗಳಾದ ಮದನ್ ಬಿ ಲೋಕುರ್ ಮತ್ತು ದೀಪಕ್ ಗುಪ್ತಾ  ಅವರನ್ನೊಳಗೊಂಡ ಪೀಠ ಹೇಳಿದೆ.
ಖಾಸಗಿ ಸಂಸ್ಥೆಯೊದರ ಪರ ವಕೀಲರಾದ ಮುಕುಲ್ ರೋಹ್ಟಗಿ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಾ ಆಂಧ್ರ ಪ್ರದೇಶದ ಸಂಸ್ಥೆಯೊಂದು ಅಕ್ರಮ ಗಣಿಗಾರಿಕೆ ನಡೆಸಿದೆ ಎಂದು ಆರೋಪಿಸಿಸರ್ಕಾರದ ಮೇಲೆ ಅರ್ಜಿದಾರರು ಒತ್ತಡ ಹಾಕುತ್ತಿದ್ದಾರೆ ಎಂದಾಗ ನ್ಯಾಯಪೀಠವು ಈ ಮೇಲಿನಂತೆ ಹೇಳಿಕೆ ನೀಡಿದೆ.
ಟೈಮ್ಸ್ ಗ್ರೂಪ್ ನಿಂದ ಗ್ಣಿಗಾರಿಕೆ ಅಮಾನತುಗೊಳಿಸಿ ಆಂಧ್ರ ಪ್ರದೇಶ ಸರ್ಕಾರ ಹೊರಡಿಸಿದ ಆದೇಶದ ದಾಖಲೆ ಪ್ರಸ್ತುತ ಪಡಿಸಿ,ಸರ್ಕಾರಿ ವಕೀಲರು ವಾದ ಮಂಡಿಸಿದ್ದರು. ಆಗ ಸಂಸ್ಥೆ ಪರ ವಕೀಲರಾದ ರೋಹ್ಟಗಿ ಸರ್ವೋಚ್ಚ ನ್ಯಾಯಾಲಯದಲ್ಲಿ ಈ ಪ್ರಕರಣ ಇದೆ ಎನ್ನುವ ಕಾರಣಕ್ಕಷ್ಟೇ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ, ಇದೊಂದು ಅಕ್ರಮ ಗಣಿಗಾರಿಕೆ ಪ್ರಕರಣವಲ್ಲ ಎಂದು ಪ್ರತಿವಾದ ಹೂಡಿದ್ದಾರೆ.
ಅರ್ಜಿದಾರ ಇಎಎಸ್ ಶರ್ಮಾ ಪರ ವಕೀಲರಾದ ಪ್ರಶಾಂತ್ ಭೂಷಣ್ ಸರ್ಕಾರ ಕೇವಲ ಪರವಾನಗಿ ಅಮಾನತುಗೊಳಿಸಿದೆ.ಆದರೆ ಸಂಸ್ಥೆಯ ಲೈಸನ್ಸ್ ರದ್ದುಪಡಿಸಿ ಅದರಿಂದ ಹಣ ವಸೂಲಿ ಮಾಡಿಕೊಳ್ಳಬೇಕು ಎಂದು ವಾದಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರೋಹ್ಟಗಿ ಸರ್ಕಾರದ ಮೇಲೆ ಒತ್ತಡ ಹೇರಲು ಈ ಅರ್ಜಿ ಹಾಕಲಾಗಿದೆ, ಇಲ್ಲಿ ಅಕ್ರಮ ಗಣಿಗಾರಿಕೆ ಎನ್ನಲು ಯಾವ ಆಧಾರವಿಲ್ಲ ಎಂದು ವಾದಿಸಿದ್ದಾರೆ.
ಇದಕ್ಕೆ ಹಿಂದೆ ಸರ್ವೋಚ್ಚ ನ್ಯಾಯಾಲಯ ಆಂಧ್ರದಲ್ಲಿ ಖಾಸಗಿ ಸಂಸ್ಥೆ ಅಕ್ರಮ ಗಣಿಗಾರಿಕೆ ನಡೆಸಿದೆ ಎನ್ನುವ ವಿಚಾರ ಕುರಿತಂತೆ ಎಸ್ ಐಟಿ ಅಥವಾ ಸಿಬಿಐನಿಂದ ತನಿಖೆ ಆಗಬೇಕು ಎಂದು ಕೋರಿ ಸಲ್ಲಿಸಿದ ಅರ್ಜಿಗೆ ಪ್ರತಿಕ್ರಯಿಸುವಂತೆ ಕೇಂದ್ರ, ಆಂಧ್ರ ಸರ್ಕಾರ ಹಾಗೂ ಟೈಮ್ಸ್ ಗ್ರೂಪ್ ಸಂಸ್ಥೆಗೆ ನ್ಯಾಯಾಲಯ ಸೂಚನೆ ನಿಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT