ಭಾರತ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ: ಯೋಧರ ಹತ್ಯೆ ಹಿಂದೆ ನಮ್ಮ ಕೈವಾಡ ಇಲ್ಲ: ಪಾಕಿಸ್ತಾನ 
ದೇಶ

ಭಾರತ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ: ಯೋಧರ ಹತ್ಯೆ ಹಿಂದೆ ನಮ್ಮ ಕೈವಾಡ ಇಲ್ಲ: ಪಾಕಿಸ್ತಾನ

ನಿಗದಿಯಾಗಿದ್ದ ಭಾರತ-ಪಾಕ್ ವಿದೇಶಾಂಗ ಸಚಿವರ ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿರುವ ಬಗ್ಗೆ ಪಾಕಿಸ್ತನಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇಸ್ಲಾಮಾಬಾದ್: ನಿಗದಿಯಾಗಿದ್ದ ಭಾರತ-ಪಾಕ್ ವಿದೇಶಾಂಗ ಸಚಿವರ ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿರುವ ಬಗ್ಗೆ ಪಾಕಿಸ್ತನಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಪಾಕಿಸ್ತಾನ, " ಭಾರತ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ. ಮಾತುಕತೆ ರದ್ದುಗೊಳಿಸುವುದಕ್ಕೆ ಭಾರತ ನೀಡಿರುವ ಕಾರಣಗಳು ಸಮರ್ಪಕವಾಗಿಲ್ಲ. ಬಿಎಸ್ ಎಫ್ ಯೋಧರ ಹತ್ಯೆ ಹಿಂದೆ ನಮ್ಮ ಕೈವಾಡವೇನು ಇಲ್ಲ" ಎಂದು ಪಾಕಿಸ್ತಾನ ಹೇಳಿದೆ.
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಪಾಕ್ ಬೆಂಬಲಿತ ಉಗ್ರರ ಸಮಸ್ಯೆ ಉಲ್ಬಣವಾಗುತ್ತಿದ್ದು, ಪೊಲೀಸರನ್ನು ಉಗ್ರರು ಹತ್ಯೆ ಮಾಡಿದ ಬೆನ್ನಲ್ಲೆ ಭಾರತ, ಪಾಕಿಸ್ತಾನದೊಂದಿಗಿನ ಮಾತುಕತೆಯನ್ನು ರದ್ದುಗೊಳಿಸಿತ್ತು. ಭಾರತ ಮಾತುಕತೆ ರದ್ದುಗೊಳಿಸುವುದಕ್ಕೆ ಕಾರಣ ಎಂದು ಹೇಳಲಾಗುತ್ತಿರುವ ಘಟನೆಗಳು, ಭಾರತ ಮಾತುಕತೆಗೆ ಒಪ್ಪಿಗೆ ಸೂಚಿಸುವ ಮುನ್ನವೇ ನಡೆದಿರುವ ಘಟನೆಗಳಾಗಿವೆ ಆದರೆಮ್ ಭಾರತ ಮತ್ತೊಮ್ಮೆ ಮಾತುಕತೆ ನಿರಾಕರಿಸುವ ಮೂಲಕ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ, ಇದರಿಂದ ಪಾಕಿಸ್ತಾನಕ್ಕೆ ತೀವ್ರ ಬೇಸರ ಉಂಟಾಗಿದೆ ಎಂದು ಪಾಕ್ ಸರ್ಕಾರ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT