ಸಾಂದರ್ಭಿಕ ಚಿತ್ರ 
ದೇಶ

ಶಿಮ್ಲಾ: ಕಂದಕಕ್ಕೆ ಉರುಳಿದ ಬಸ್, ಮೂವರು ದಂಪತಿ ಸೇರಿ 13 ಸಾವು

ಖಾಸಗಿ ಬಸ್ ವೊಂದು ಕಂದಕಕ್ಕೆ ಉರುಳಿ ಮೂವರು ದಂಪತಿ ಸೇರಿದಂತೆ 13 ಜನ ಮೃತಪಟ್ಟಿರುವ ದಾರುಣ ಘಟನೆ...

ಶಿಮ್ಲಾ: ಖಾಸಗಿ ಬಸ್ ವೊಂದು ಕಂದಕಕ್ಕೆ ಉರುಳಿ ಮೂವರು ದಂಪತಿ ಸೇರಿದಂತೆ 13 ಜನ ಮೃತಪಟ್ಟಿರುವ ದಾರುಣ ಘಟನೆ ಹಿಮಾಚಲ ಪ್ರದೇಶದ ಸನೈ‌ಲ್‌ನಲ್ಲಿ ಶನಿವಾರ ನಡೆದಿದೆ. 
ಶಿಮ್ಲಾದಿಂದ 65 ಕಿ. ಮೀ. ದೂರದಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಹಕೋಟಿಯಿಂದ ಉತ್ತರಾಖಂಡ್ ನ ತಿಯುನಿಗೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 
ಮೂವರು ದಂಪತಿಗಳು ಹಾಗೂ ಏಳು ವರ್ಷದ ಮಗು ಸೇರಿದಂತೆ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಶಿಮ್ಲಾ ಪೊಲೀಸ್ ಅಧೀಕ್ಷಕ ಓಂಪತಿ ಜಮ್ವಾಲ್ ಹೇಳಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಮೂವರು ಚಿಕಿತ್ಸೆ ಫಲಕಾರಿಯಾಗದೆ ರೊಹ್ರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮೃತರನ್ನು ಮತ್ವರ್ ಸಿಂಗ್ (48) ಅವರ ಪತ್ನಿ ಬಸಂತಿ ದೇವಿ (44), ಪುತ್ರ ಮುನೀಶ್ (24), ಪ್ರೇಮ್ ಸಿಂಗ್ (38) ಅವರ ಪತ್ನಿ ಪೂನಮ್(30), ಮಗು ರಿಧಿಮಾ (6), ಅತ್ತರ್ ಸಿಂಗ್ (44) ಪತ್ನಿ ಮುನ್ನಾ ದೇವಿ , ಬಿಟ್ಟು (42), ಬಂದಿ ದೇವಿ (48) ನೆರ್ ಸಿಂಗ್ (35), ಮನೋಜ್ 9350 ಮತ್ತು ಅನಿಲ್ (28) ಎಂದು ಗುರುತಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT