ಸ್ಟೆರ್ಲೈಟ್ ಘಟಕ 
ದೇಶ

ಸ್ಟೆರ್ಲೈಟ್ ತಾಮ್ರ ಘಟಕ ಮತ್ತೆ ಆರಂಭವಾಗಲ್ಲ: ತಮಿಳುನಾಡು ಸರ್ಕಾರ

ತೂತುಕುಡಿ ಜನರ ಭಾವನೆಗಳಿಗೆ ಅನುಗುಣವಾಗಿ ಸ್ಟೆರ್ಲೈಟ್ ತಾಮ್ರ ಘಟಕವನ್ನು ಮುಚ್ಚಲಾಗಿದ್ದು, ಅದನ್ನು...

ಚೆನ್ನೈ: ತೂತುಕುಡಿ ಜನರ ಭಾವನೆಗಳಿಗೆ ಅನುಗುಣವಾಗಿ ಸ್ಟೆರ್ಲೈಟ್ ತಾಮ್ರ ಘಟಕವನ್ನು ಮುಚ್ಚಲಾಗಿದ್ದು, ಅದನ್ನು ಮತ್ತೆ ತೆರೆಯುವುದಿಲ್ಲ ಎಂದು ತಮಿಳುನಾಡು ಸರ್ಕಾರ ಶನಿವಾರ ಭರವಸೆ ನೀಡಿದೆ.
ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ನೇಮಕ ಮಾಡಿರುವ ಮೆಘಾಲಯ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ತರುಣ್ ಅಗರ್ವಾಲ್ ನೇತೃತ್ವದ ತ್ರಿಸದಸ್ಯ ಸಮಿತಿ ವೆದಾಂತ್ ಗ್ರೂಪ್ ಸ್ಟೆರ್ಲೈಟ್ ತಾಮ್ರ ಘಟಕಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ತಮಿಳು ಸರ್ಕಾರ ಈ ಸ್ಪಷ್ಟನೆ ನೀಡಿದೆ.
ನಮ್ಮ ನಿರ್ಧಾರ ಸ್ಪಷ್ಟವಾಗಿದೆ. ಒಂದು ಬಾರಿ ಬಂದ್ ಆದ ಘಟಕವನ್ನು ಮತ್ತೆ ಆರಂಭಮಾಡುವ ಪ್ರಶ್ನೆಯೇ ಇಲ್ಲ. ಅವರು ಬಂದ್ ಮಾಡಿದ್ದನ್ನು ಪ್ರಶ್ನಿಸಿ ಎನ್ ಜಿಟಿ ಮೊರೆ ಹೋಗಿದ್ದಾರೆ. ನಾವು ತ್ರಿಸದಸ್ಯ ಸಮಿತಿಯ ಅಗತ್ಯ ಇಲ್ಲ ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದೇವೆ ಎಂದು ಮೀನುಗಾರಿಕೆ ಸಚಿವ ಡಿ ಜಯಕುಮಾರ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ತೂತುಕುಡಿ ನಿವಾಸಿಗಳ ತೀವ್ರ ಪ್ರತಿಭಟನೆ ಮತ್ತು ಹಿಂಸಾಚಾರಕ್ಕೆ 13 ಮಂದಿ ಬಲಿಯಾದ ಬಳಿಕ ಸ್ಟೆರ್ಲೈಟ್ ತಾಮ್ರ ಕಂಪನಿಯನ್ನು ಮುಚ್ಚಲಾಗಿದೆ. ಇದನ್ನು ಪ್ರಶ್ನಿಸಿದ ವೆದಾಂತ್ ಗ್ರೂಪ್ ಎನ್ ಜಿಟಿ ಮೊರೆ ಹೋಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ. ನೆರವು - ಸರ್ಕಾರಕ್ಕೆ ಆಕ್ಷನ್‌ ಪ್ರಿನ್ಸ್‌ ಹೇಳಿದ್ದೇನು?

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

SIR ಗೆ ಆಕ್ಷೇಪ; ಪಶ್ಚಿಮ ಬಂಗಾಳ ಚುನಾವಣೆ ರದ್ದತಿಗೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್; ವಿರೋಧಿಗಳಿಗೆ ತೀವ್ರ ಹಿನ್ನಡೆ!

ಥಾಣೆ ಬಳಿ ಕಾಂಕ್ರೀಟ್ ಮಿಕ್ಸರ್ ಲಾರಿ - ವ್ಯಾನ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 11 ಮಂದಿ ಸಾವು

SCROLL FOR NEXT