ಸಂಗ್ರಹ ಚಿತ್ರ 
ದೇಶ

ರಾಫೆಲ್ ಒಪ್ಪಂದ ಸಂಬಂಧ ಸರ್ಕಾರ ತನ್ನ ತಪ್ಪಿಲ್ಲ ಎಂಬುದನ್ನು ಸಾಬೀತು ಪಡಿಸಬೇಕು: ಶತೃಘ್ನ ಸಿನ್ಹಾ

ದೇಶಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿರುವ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧ ಕೇಂದ್ರ ಸರ್ಕಾರ ತಾನು ಶುದ್ಧ ಹಸ್ತ ಎಂಬುದನ್ನು ಸಾಬೀತು ಪಡಿಸಬೇಕು ಎಂದು ಹಿರಿಯ ಬಿಜೆಪಿ ಮುಖಂಡ ಶತೃಘ್ನಸಿನ್ಹಾ ಹೇಳಿದ್ದಾರೆ.

ನವದೆಹಲಿ: ದೇಶಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿರುವ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸಂಬಂಧ ಕೇಂದ್ರ ಸರ್ಕಾರ ತಾನು ಶುದ್ಧ ಹಸ್ತ ಎಂಬುದನ್ನು ಸಾಬೀತು ಪಡಿಸಬೇಕು ಎಂದು ಹಿರಿಯ ಬಿಜೆಪಿ ಮುಖಂಡ ಶತೃಘ್ನಸಿನ್ಹಾ ಹೇಳಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ಮಾತನಾಡಿದ ಶತೃಘ್ನ ಸಿನ್ಹಾ, ರಾಫೆಲ್ ಒಪ್ಪಂದ ಸಂಬಂಧ ಫ್ರಾನ್ಸ್ ಮಾಜಿ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಅವರು ನೀಡಿರುವ ಹೇಳಿಕೆ ಗಂಭೀರವಾದದ್ದು. ಅಂತೆಯೇ ರಾಫೆಲ್ ಒಪ್ಪಂದ ಸಂಬಂಧ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಹೇಳಿಕೆ ಕೊಟ್ಟಿರುವುದು ಕೇವಲ ಫ್ರಾನ್ಸ್ ಮಾಜಿ ಅಧ್ಯಕ್ಷರು ಮಾತ್ರವಲ್ಲ. ಬದಲಿಗೆ ರಾಫೆಲ್ ಒಪ್ಪಂದಕ್ಕೆ ಸಹಿ ಹಾಕಿದ ವ್ಯಕ್ತಿ. ಹೀಗಾಗಿ ಅವರ ಹೇಳಿಕೆ ಗಂಭೀರತೆ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.
ಅಂತೆಯೇ ಕೇಂದ್ರ ಸರ್ಕಾರ ಈ ಬಗ್ಗೆ ತಾನು ಶುದ್ಧಹಸ್ತ ಎಂಬುದನ್ನು ಸಾಬೀತು ಪಡಿಸಬೇಕು. ಅಂತೆಯೇ ಅನುಭವಿ ಹೆಚ್ಎಲ್ ಅನ್ನು ಪಕ್ಕಕ್ಕಿಟ್ಟು, ಅನನುಭವಿ ರಿಲಯನ್ಸ್ ಅನ್ನು ಒಪ್ಪಂದಕ್ಕೆ ಸೇರಿಸಿಕೊಂಡಿದ್ದೇಕೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಸಿನ್ಹಾ ಹೇಳಿದ್ದಾರೆ. 
ಅಂತೆಯೇ ಬಿಜೆಪಿ ಪಕ್ಷದ ಸಂಸದರಾಗಿದ್ದುಕೊಂಡು ತಮ್ಮದೇ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದರ ಕುರಿತು ಮಾತನಾಡಿದ ಸಿನ್ಹಾ, ನನ್ನನ್ನು ರೆಬೆಲ್ ಎಂದು ಕರೆಯುತ್ತಾರೆ. ಆದರೆ ಸತ್ಯ ಮಾತನಾಡುವುದಕ್ಕೆ ನಾನು ಭಯಪಡುವುದಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT