ಸಾಂದರ್ಭಿಕ ಚಿತ್ರ 
ದೇಶ

ರೆವಾರಿ ಸಾಮೂಹಿಕ ಅತ್ಯಾಚಾರ ಪ್ರಕರಣ; ಯೋಧ ಸೇರಿ ಇಬ್ಬರು ಪ್ರಮುಖ ಆರೋಪಿಗಳ ಬಂಧನ

ಸಿಬಿಎಸ್'ಸಿ ಟಾಪರ್ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧ ಸೇರಿ ಇಬ್ಬರು ಪ್ರಮುಖ ಆರೋಪಿಗಳನ್ನು ಹರಿಯಾಣ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ...

ಚಂಡೀಗಢ: ಸಿಬಿಎಸ್'ಸಿ ಟಾಪರ್ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧ ಸೇರಿ ಇಬ್ಬರು ಪ್ರಮುಖ ಆರೋಪಿಗಳನ್ನು ಹರಿಯಾಣ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ. 
ಯೋಧ ಮನೀಷ್ ಮತ್ತು ಪಂಕಜ್ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು, ಇಬ್ಬರನ್ನೂ ಬಂಧನಕ್ಕೊಳಪಡಿಸಲಾಗಿದೆ ಎಂದು ಡಿಜಿಪಿ ಬಿ.ಎಸ್. ಸಂಧು ಅವರು ಹೇಳಿದ್ದಾರೆ. 
ಘಟನೆಯಲ್ಲಿ ಮನೀಷ್ ಹಾಗೂ ಪಂಕಜ್ ಪ್ರಮುಖ ಆರೋಪಿಗಳಾಗಿದ್ದು, ಘಟನೆ ಬಳಿಕ ಇಬ್ಬರೂ ತಲೆ ಮರೆಸಿಕೊಂಡಿದ್ದರು ಎಂತು ತಿಳಿಸಿದ್ದಾರೆ. 
ರಾಷ್ಟ್ರದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಿಶು ಹಾಗೂ ಮತ್ತಿಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿತ್ತು. 
ಸಿಬಿಎಸ್‌ಇ ಪರೀಕ್ಷೆಯಲ್ಲಿ ದೇಶಕ್ಕೇ ಟಾಪರ್ ಆಗಿ, ರಾಷ್ಟ್ರಪತಿಗಳಿಂದ ಸನ್ಮಾನ ಸ್ವೀಕರಿಸಿದ 19 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿದ ದುಷ್ಕರ್ಮಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಗುರಗಾಂವ್ ನಿಂದ 116 ಕಿಲೋಮೀಟರ್ ದೂರದ ಬಸ್‌ ನಿಲ್ದಾಣವೊಂದರಲ್ಲಿ ಅರೆ ನಗ್ನ ಸ್ಥಿತಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಯುವತಿ ಪತ್ತೆಯಾಗಿದ್ದಳು. ಕೂಡಲೇ ಸ್ಥಳೀಯರು ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಸಾಮೂಹಿಕ ಅತ್ಯಾಚಾರ ವಿಚಾರ ಬೆಳಕಿಗೆ ಬಂದಿತ್ತು. ಪ್ರಕರಣ ಸಂಬಂಧ ಹರಿಯಾಣ ಪೊಲೀಸರು ವಿಶೇಷ ತಂಡವನ್ನು ರಚನೆ ಮಾಡಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT