ಸರ್ವೇಶ್ವರ್ ರಾವ್ 
ದೇಶ

ಆಂಧ್ರಪ್ರದೇಶ: ಇಬ್ಬರು ಟಿಡಿಪಿ ನಾಯಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಮಹಿಳಾ ಮಾವೋವಾದಿಗಳು!

ಟಿಡಿಪಿ ಶಾಸಕ ಸರ್ವೇಶ್ವರ್ ರಾವ್ ಅವರನ್ನು ಮಾವೋವಾದಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ವಿಶಾಖಪಟ್ಟಣ: ಟಿಡಿಪಿ ಶಾಸಕ ಸರ್ವೇಶ್ವರ್ ರಾವ್ ಅವರೂ ಸೇರಿದಂತೆ ಒಟ್ಟು ಇಬ್ಬರು ಟಿಡಿಪಿ ನಾಯಕರನ್ನು ಮಹಿಳಾ ಮಾವೋವಾದಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 
ವಿಶಾಖಪಟ್ಟಣದ ಅರಕು ವ್ಯಾಲಿಯಲ್ಲಿ ಘಟನೆ ನಡೆದಿದ್ದು, ಶಾಸಕರೊಂದಿಗಿದ್ದ ಮತ್ತೋರ್ವ ಟಿಡಿಪಿ ನಾಯಕನೂ ಮಾವೋವಾದಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ. ಸರ್ವೇಶ್ವರ್ ರಾವ್ ಹಾಗೂ ಮತ್ತೋರ್ವ ಟಿಡಿಪಿ ನಾಯಕ, ಮಾಜಿ ಶಾಸಕನ ಸಿವೆರಿ ಸೋಮಾ ಅವರನ್ನೂ ಹತ್ಯೆ ಮಾಡಲಾಗಿದೆ. ಇಬ್ಬರೂ ನಾಯಕರು ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. 
ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರು ನಾಯಕರನ್ನು ಮಾವೋವಾದಿಗಳು ಹತ್ಯೆ ಮಾಡಿದ್ದು, ಇದಕ್ಕೂ ಮುನ್ನ ಮಹಿಳಾ ಮಾವೋವಾದಿಗಳು-ಟಿಡಿಪಿ ನಾಯಕರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಹೇಳಲಾಗುತ್ತಿದೆ. ಗಣಿಗಾರಿಕೆಯನ್ನು ತಕ್ಷಣವೇ ನಿಲ್ಲಿಸುವಂತೆ ಮಾವೋವಾದಿ ನಾಯಕರು ಸರ್ವೇಶ್ವರ್ ರಾವ್ ಅವರಿಗೆ ಎಚ್ಚರಿಸಿದರು. ಈ ಸಂಬಂಧ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ಮಹಿಳಾ ಮಾವೋವಾದಿಗಳು ಶಾಸಕ, ಮಾಜಿ ಶಾಸಕನ ಮೇಲೆ ಗುಂಡು ಹಾರಿಸಿದ್ದು, ಆಂಧ್ರ-ಒಡಿಶಾ ಗಡಿ ಭಾಗದಲ್ಲಿದ್ದ ತಂಡ ಇದಾಗಿದೆ ಎಂದು ಹೇಳಲಾಗುತ್ತಿದೆ. ವೈಎಸ್ ಆರ್ ಕಾಂಗ್ರೆಸ್ ನಲ್ಲಿದ್ದ ಸರ್ವೇಶ್ವರ್ ರಾವ್ 2016 ರಲ್ಲಿ ಟಿಡಿಪಿಗೆ ಸೇರ್ಪಡೆಯಾಗಿದ್ದರು. ಹುಕುಂಪೇಟ್ ಮಂಡಲ್ ನಲ್ಲಿ ತಮ್ಮ ಸಂಬಂಧಿಕರ ಹೆಸರಿನಲ್ಲಿ ಗಣಿಗಾರಿಕೆ ಪರವಾನಗಿ ಪಡೆದಿದ್ದಕ್ಕಾಗಿ ಬುಡಕಟ್ಟು ಜನಾಂಗದವರು ಗಿರಿಜನ ಸಂಘಂ ಬ್ಯಾನರ್ ನಡಿ ಪ್ರತಿಭಟನೆ ನಡೆಸುತ್ತಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT