ಲಾಲ್ ಬಹದ್ದೂರ್ ಶಾಸ್ತ್ರಿ 
ದೇಶ

ಮಾಜಿ ಪ್ರಧಾನಿ ಶಾಸ್ತ್ರಿ ನಿಗೂಢ ಸಾವಿನ ದಾಖಲೆಗಳ ಬಹಿರಂಗ ಕುರಿತು ಪ್ರಧಾನಿ, ಗೃಹ ಸಚಿವರು ನಿರ್ಧರಿಸಲಿ: ಸಿಐಸಿ

ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸಾವಿನ ಬಗ್ಗೆ ಎಲ್ಲಾ ದಾಖಲೆಗಳನ್ನು ಬಹಿರಂಗಪಡಿಸುವ ಕುರಿತು ಪ್ರಧಾನ ಮಂತ್ರಿ ಹಾಗೂ ಗೃಹಸಚಿವರು.....

ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸಾವಿನ ಬಗ್ಗೆ ಎಲ್ಲಾ ದಾಖಲೆಗಳನ್ನು ಬಹಿರಂಗಪಡಿಸುವ ಕುರಿತು ಪ್ರಧಾನ ಮಂತ್ರಿ ಹಾಗೂ ಗೃಹಸಚಿವರು ನಿರ್ಧರಿಸಬೇಕು ಎಂದು  ಸಿಐಸಿ ಸೋಮವಾರ ತೀರ್ಪು ನೀಡಿತು.
ಭಾರತದ ಮಾಜಿ ಪ್ರಧಾನಿ ಶಾಸ್ತ್ರಿ ಜನವರಿ 11, 1966 ರಂದು ತಾಷ್ಕೆಂಟ್ ನಲ್ಲಿ ನಿಧನರಾಗಿದ್ದರು.
"ಶಾಸ್ತ್ರಿ ಮರಣದ ಕುರಿತ ಸಂಪೂರ್ಣ ದಾಖಲೆಗಳನ್ನು ಮಾಹಿತಿ ಹಕ್ಕು ಅಡಿ ಪರಿಗಣಿಸಿ ಬಹಿರಂಗಪಡಿಸುವ ವಿಚಾರವನ್ನು ಪ್ರಧಾನಿ ಹಾಗೂ ಗೃಹಸಚಿವರಿಗೆ ನಾವು ವಹಿಸಿಕೊಟ್ಟಿದ್ದೇವೆ." ಮಾಹಿತಿ ಆಯುಕ್ತ ಶ್ರೀಧರ್ ಆಚಾರ್ಯುಲು ಹೇಳಿದರು.
ಎಪ್ಪತ್ತರ ದಶಕದ ಉತ್ತರಾರ್ಧದಲ್ಲಿ ಜನತಾ ಪಕ್ಷದ ಸರ್ಕಾರದ ಅವಧಿಯಲ್ಲಿ ಶಾಸ್ತ್ರಿ ಅವರ ಮರಣದ ಬಗ್ಗೆ ತನಿಖೆ ನಡೆಸಲು ರಾಜ್ ನಾರಾಯಣ್ ಸಮಿತಿ ರಚಿಸಲಾಗಿದ್ದು ಆದರೆ ಈ ಸಮಿತಿ ನೀಡಿರುವ ಯಾವ ದಾಖಲಾತಿಗಳೂ ರಾಜ್ಯಸಭೆಯ ಬಳಿ ಇಲ್ಲ ಎನ್ನುವುದು ಅಚ್ಚರಿದಾಯಕ ಸಂಗತಿ ಎಂದು ಅವರು ಹೇಳಿದ್ದಾರೆ.
ಸಂಸತ್ತಿನಲ್ಲಿ ಮಾತನಾಡಿದ ಪ್ರತಿಯೊಂದು ಶಬ್ದವೂ ಸಾರ್ವಜನಿಕ  ಡೊಮೈನ್ ನಲ್ಲಿ ದಾಖಲಾಗುತ್ತದೆಯಾದರೂ ಇಂತಹಾ ಮಹತ್ವದ ದಾಖಲೆ ಹೇಗೆ ಕಣ್ಮರೆಯಾಗಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ಸಮಿತಿಯ ದಾಖಲೆಗಳನ್ನು ಸಂರಕ್ಷಿಸಲು ಅಥವಾ ಕ್ಣ್ಮರೆಯಾದ ದಾಖಲೆ ಸಂಬಂಧ ತನಿಖೆ ನಡೆಸಲು ಸಂಸತ್ತಿನ 'ಸಾಂವಿಧಾನಿಕ ಅಧಿಕಾರಿಗಳು' ಮುಂದಾಗಬೇಕು ಎಂದು ದು ಆಚಾರ್ಯುಲು ಶಿಫಾರಸು ಮಾಡಿದರು.
1965 ರ ಇಂಡೋ-ಪಾಕ್ ಯುದ್ಧದ ತರುವಾಯ ಪಾಕ್ ಅಧ್ಯಕ್ಷ  ಮುಹಮ್ಮದ್ ಆಯುಬ್ ಖಾನ್ ಹಾಗೂ ಶಾಸ್ತ್ರಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಕೆಲವೇ ಗಂಟೆಗಳ ಬಳಿಕ ಅವರು ತಾಷ್ಕೆಂಟ್ ನಲ್ಲಿ ಮೃತರಾದರು. ಅವರು ತೀವ್ರ ಹೃದಯಾಘಾತದಿಂದ ಮರಣಹೊಂದಿದರು ಎಂದೆನ್ನಲಾಗಿತ್ತಾದರೂ ಆ ದಿನಗಳಲ್ಲಿ ಉತ್ತುಂಗದಲ್ಲಿದ್ದ ಶೀತಲ ಸಮರ ಕಾರಣ ವಿದೇಶೀ ನೆಲದಲ್ಲಿ ಭಾರತೀಯ ನಾಯಕಾ ಸಾವನ್ನು ಪ್ರಶ್ನಿಸಲಾಗಿದೆ.
ಇತ್ತೀಚೆಗೆ ಆರ್ ಟಿಐ ಕಾಯ್ದೆಯಡಿ ಶಾಸ್ತ್ರಿ ಅವರ ನಿಗೂಢ ಸಾವಿನ ಕುರಿತ ದಾಖಲೆ ಬಹಿರಂಗಪಡಿಸಲು ಅರ್ಜಿ ಸಲ್ಲಿಕೆಯಾಗಿತ್ತು. ಆದರೆ ಕೇಂದ್ರ ಸರ್ಕಾರ ಮಾತ್ರ ಇದು ರಹಸ್ಯ ಮತ್ತು ಬಹಿರಂಗಪಡಿಸಲಾಗದ ದಾಖಲೆಗಳಾಗಿದೆ.ಇದು ದೇಶದ ಹಿತಸಕ್ತಿಗೆ ಮಾರಕವಾಗಿದೆ ಎಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT