ಸಂಗ್ರಹ ಚಿತ್ರ 
ದೇಶ

ಹೃದಯ ವಿದ್ರಾವಕ ಘಟನೆ: ಅಪಘಾತದಿಂದ ರಕ್ತದ ಮಡುವಿನಲ್ಲಿದ್ದ ಗಂಡನಿಗೆ ಪತ್ನಿ (ನರ್ಸ್) ಯಿಂದ ಚಿಕಿತ್ಸೆ, ಸಾವು!

ನರ್ಸ್ ಕೆಲಸ ಮಾಡುವವರು ಪ್ರತಿ ದಿನ ಅಪಘಾತದಲ್ಲಿ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ಮಾಡುವುದು ಸಾಮಾನ್ಯ. ಆದರೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು...

ಸೇಲಂ: ನರ್ಸ್ ಕೆಲಸ ಮಾಡುವವರು ಪ್ರತಿ ದಿನ ಅಪಘಾತದಲ್ಲಿ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ಮಾಡುವುದು ಸಾಮಾನ್ಯ. ಆದರೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ತನ್ನ ಗಂಡ ಅಂತ ತಿಳಿಯದೇ ನರ್ಸ್ ಒಬ್ಬರು ಪ್ರಥಮ ಚಿಕಿತ್ಸೆ ನೀಡಿದ್ದು ದುರಾದೃಷ್ಟವಶಾತ್ ಆತ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಸೇಲಂನಲ್ಲಿ ನಡೆದಿದೆ. 
ಸೇಲಂನ ಮೆಚ್ಚೇರಿಯ ನಿವಾಸಿ ಶ್ರೀನಿವಾಸನ್ ಪತ್ನಿ ಶಿವಗಾಮಿ ಒಮಲೂರ್ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶ್ರೀನಿವಾಸನ್ ಕಳೆದ ಭಾನುವಾರ ಮೆಚ್ಚೇರಿಯಿಂದ ಸೇಲಂಗೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಕಾರು ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದರು. 
ತಲೆಗೆ ಮತ್ತು ಮುಖಕ್ಕೆ ತೀವ್ರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಒಮಲೂರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕರ್ತವ್ಯದಲ್ಲಿದ್ದ ಶಿವಗಾಮಿ ತುರ್ತುಚಿಕಿತ್ಸಾ ವಿಭಾಗಕ್ಕೆ ದಾಖಲಾದ ರೋಗಿಗೆ ಪ್ರಥಮ ಚಿಕಿತ್ಸೆ ನೀಡುತ್ತಾ ಮುಖದ ಮೇಲಿನ ರಕ್ತ ಮತ್ತು ಗಾಯವನ್ನು ಶುಚಿಗೊಳಿಸುವ ಸಂದರ್ಭ ಆ ವ್ಯಕ್ತಿಯೇ ತನ್ನ ಗಂಡನೆಂದು ಗೊತ್ತಾಗಿದೆ. 
ಶ್ರೀನಿವಾಸನ್ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದರು. ತನ್ನ ಪತಿಯ ಶವ ಕಂಡ ಶಿವಗಾಮಿ ಶವವನ್ನು ಆಲಂಗಿಸಿಕೊಂಡು ಕುಸಿದುಬಿದ್ದರು. ಈ ದೃಶ್ಯ ಎಂತವರ ಕಣ್ಣಲ್ಲು ನೀರೂರುವಂತೆ ಮಾಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT