ಸಂಗ್ರಹ ಚಿತ್ರ 
ದೇಶ

ಪಟ್ನಾ: ವಿಮಾನದಲ್ಲಿ ಶೌಚಾಲಯಕ್ಕೆ ಹೋಗಲು ತುರ್ತು ದ್ವಾರ ತೆರೆಯಲೆತ್ನಿಸಿದ ಪ್ರಯಾಣಿಕ!

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಶೌಚಾಲಯ ಬಾಗಿಲು ತೆರೆಯುವ ಬದಲು ವಿಮಾನ ಆಗಸದಲ್ಲಿ ಹಾರುತ್ತಿದ್ದಾಗಲೇ ತುರ್ತು ನಿರ್ಗಮನ ದ್ವಾರ ತೆಗೆಯಲು ಪ್ರಯತ್ನಿಸಿದ ವಿಚಿತ್ರ ಘಟನೆ.....

ಪಾಟ್ನಾ: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಶೌಚಾಲಯ ಬಾಗಿಲು ತೆರೆಯುವ ಬದಲು ವಿಮಾನ ಆಗಸದಲ್ಲಿ ಹಾರುತ್ತಿದ್ದಾಗಲೇ ತುರ್ತು ನಿರ್ಗಮನ ದ್ವಾರ ತೆಗೆಯಲು ಪ್ರಯತ್ನಿಸಿದ ವಿಚಿತ್ರ ಘಟನೆ ಗೋ ಏರ್ ವಿಮಾನದಲ್ಲಿ ನಡೆದಿದೆ. ದೆಹಲಿ-ಪಾಟ್ನಾ ನಡುವೆ ಸಂಚರಿಸುವ ಗೋ ಏರ್ ವಿಮಾನ ಜಿ 8 149 ನಲ್ಲಿ ಸೆಪ್ಟೆಂಬರ್ 22ರಂದು ಈ ಘಟನೆ ನಡೆದಿತ್ತು.
ಘಟನೆ ನಡೆದ ವಿಮಾನದಲ್ಲಿ ಒಟ್ಟು 150  ಪ್ರಯಾಣಿಕರಿದ್ದು ವ್ಯಕ್ತಿ ತಾನು ಶೌಚಾಲಯಕ್ಕೆ ತೆರಳಬೇಕೆಂದು ನಿರ್ಧರಿಸಿದ್ದು ತಾನು ಶೌಚಾಲಯದ ಬಾಗಿಲು ತೆರೆಯುತ್ತಿದ್ದೇನೆ ಎಂದು ತಪ್ಪಾಗಿ ಅರ್ಥೈಸಿಕೊಂಡ ಆತ ವಿಮಾನದ ತುರ್ತು ದ್ವಾರ ತೆರೆಯಲು ಯತ್ನಿಸಿದ್ದಾನೆ. ಈ ವೇಳೆ ಕೆಲವರಿಗೆ ಗಾಯಗಳಾಗಿದೆ.
ವ್ಯಕ್ತಿಯ ಅಚಾತುರ್ಯ ಗಮನಿಸಿದ ಸಹ ಪ್ರಯಾಣಿಕರು ತಕ್ಷಣ ವಿಮಾನಾ ಸಿಬ್ಬಂದಿಯನ್ನು ಕರೆದು ಎಚ್ಚರಿಸಿದ್ದಾರೆ. ಆತ ಬಂದೊಡನೆ ತುರ್ತು ದ್ವಾರ ತೆರೆಯುವ ಪ್ರಯತ್ನದಲ್ಲಿದ್ದ ವ್ಯಕ್ತಿಯನ್ನು ಇತರರ ನೆರವಿನೊಡನೆ ತಡೆಯಲು ಯಶಸ್ವಿಯಾಗಿದ್ದಾನೆ.
ವಿಮಾನ ಪಾಟ್ನಾ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ವ್ಯಕ್ತಿಯನ್ನು  ಏರ್‌ಪೋರ್ಟ್‌ ಪೊಲೀಸ್‌ ಠಾಣೆಗೆ ಕರೆದೊಯ್ದು ವಿಚಾರಣ್ಗೊಳಪಡಿಸಲಾಗಿದೆ.
ರಾಜಸ್ಥಾನದ ಅಜ್ಮೀರ್ ನಲ್ಲಿನ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿರುವ ವ್ಯಕ್ತಿ ತಾನು "ತಪ್ಪಾಗಿ" ಭಾವಿಸಿ ತುರ್ತು ನಿರ್ಗಮನ ದ್ವಾರ ತೆರೆಯಲು ಮುಂದಾಗಿದ್ದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪಾಟ್ನಾ ಏರ್ಪೋರ್ಟ್ ಪೋಲಿಸ್ ಸ್ಟೇಶನ್ ಹೌಸ್ ಆಫೀಸರ್   ಮೊಹಮ್ಮದ್ ಸನೋವರ್ ಖಾನ್ ಹೇಳಿದರು.
ವ್ಯಕ್ತಿ ಇದೇ ಪ್ರಥಮ ಬಾರಿಗೆ ವಿಮಾನಯಾನ ಕೈಗೊಂಡಿದ್ದ ಎನ್ನಲಾಗಿದ್ದು ವಿಚಾರಣೆ ಮುಗಿದ ಬಳಿಕ ಪಟ್ನಾದಲ್ಲಿನ ಕನ್ಕಾರ್‌ಬಾಗ್ ಪ್ರದೇಶದಲ್ಲಿ ನೆಲೆಸಿರುವ ಆತನ ಕುಟುಂಬದವರೊಡನೆ ತೆರಳಲು ಅವನಿಗೆ ಅನುಮತಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT