ಸಂಗ್ರಹ ಚಿತ್ರ 
ದೇಶ

ಪಟ್ನಾ: ವಿಮಾನದಲ್ಲಿ ಶೌಚಾಲಯಕ್ಕೆ ಹೋಗಲು ತುರ್ತು ದ್ವಾರ ತೆರೆಯಲೆತ್ನಿಸಿದ ಪ್ರಯಾಣಿಕ!

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಶೌಚಾಲಯ ಬಾಗಿಲು ತೆರೆಯುವ ಬದಲು ವಿಮಾನ ಆಗಸದಲ್ಲಿ ಹಾರುತ್ತಿದ್ದಾಗಲೇ ತುರ್ತು ನಿರ್ಗಮನ ದ್ವಾರ ತೆಗೆಯಲು ಪ್ರಯತ್ನಿಸಿದ ವಿಚಿತ್ರ ಘಟನೆ.....

ಪಾಟ್ನಾ: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಶೌಚಾಲಯ ಬಾಗಿಲು ತೆರೆಯುವ ಬದಲು ವಿಮಾನ ಆಗಸದಲ್ಲಿ ಹಾರುತ್ತಿದ್ದಾಗಲೇ ತುರ್ತು ನಿರ್ಗಮನ ದ್ವಾರ ತೆಗೆಯಲು ಪ್ರಯತ್ನಿಸಿದ ವಿಚಿತ್ರ ಘಟನೆ ಗೋ ಏರ್ ವಿಮಾನದಲ್ಲಿ ನಡೆದಿದೆ. ದೆಹಲಿ-ಪಾಟ್ನಾ ನಡುವೆ ಸಂಚರಿಸುವ ಗೋ ಏರ್ ವಿಮಾನ ಜಿ 8 149 ನಲ್ಲಿ ಸೆಪ್ಟೆಂಬರ್ 22ರಂದು ಈ ಘಟನೆ ನಡೆದಿತ್ತು.
ಘಟನೆ ನಡೆದ ವಿಮಾನದಲ್ಲಿ ಒಟ್ಟು 150  ಪ್ರಯಾಣಿಕರಿದ್ದು ವ್ಯಕ್ತಿ ತಾನು ಶೌಚಾಲಯಕ್ಕೆ ತೆರಳಬೇಕೆಂದು ನಿರ್ಧರಿಸಿದ್ದು ತಾನು ಶೌಚಾಲಯದ ಬಾಗಿಲು ತೆರೆಯುತ್ತಿದ್ದೇನೆ ಎಂದು ತಪ್ಪಾಗಿ ಅರ್ಥೈಸಿಕೊಂಡ ಆತ ವಿಮಾನದ ತುರ್ತು ದ್ವಾರ ತೆರೆಯಲು ಯತ್ನಿಸಿದ್ದಾನೆ. ಈ ವೇಳೆ ಕೆಲವರಿಗೆ ಗಾಯಗಳಾಗಿದೆ.
ವ್ಯಕ್ತಿಯ ಅಚಾತುರ್ಯ ಗಮನಿಸಿದ ಸಹ ಪ್ರಯಾಣಿಕರು ತಕ್ಷಣ ವಿಮಾನಾ ಸಿಬ್ಬಂದಿಯನ್ನು ಕರೆದು ಎಚ್ಚರಿಸಿದ್ದಾರೆ. ಆತ ಬಂದೊಡನೆ ತುರ್ತು ದ್ವಾರ ತೆರೆಯುವ ಪ್ರಯತ್ನದಲ್ಲಿದ್ದ ವ್ಯಕ್ತಿಯನ್ನು ಇತರರ ನೆರವಿನೊಡನೆ ತಡೆಯಲು ಯಶಸ್ವಿಯಾಗಿದ್ದಾನೆ.
ವಿಮಾನ ಪಾಟ್ನಾ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ವ್ಯಕ್ತಿಯನ್ನು  ಏರ್‌ಪೋರ್ಟ್‌ ಪೊಲೀಸ್‌ ಠಾಣೆಗೆ ಕರೆದೊಯ್ದು ವಿಚಾರಣ್ಗೊಳಪಡಿಸಲಾಗಿದೆ.
ರಾಜಸ್ಥಾನದ ಅಜ್ಮೀರ್ ನಲ್ಲಿನ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿರುವ ವ್ಯಕ್ತಿ ತಾನು "ತಪ್ಪಾಗಿ" ಭಾವಿಸಿ ತುರ್ತು ನಿರ್ಗಮನ ದ್ವಾರ ತೆರೆಯಲು ಮುಂದಾಗಿದ್ದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪಾಟ್ನಾ ಏರ್ಪೋರ್ಟ್ ಪೋಲಿಸ್ ಸ್ಟೇಶನ್ ಹೌಸ್ ಆಫೀಸರ್   ಮೊಹಮ್ಮದ್ ಸನೋವರ್ ಖಾನ್ ಹೇಳಿದರು.
ವ್ಯಕ್ತಿ ಇದೇ ಪ್ರಥಮ ಬಾರಿಗೆ ವಿಮಾನಯಾನ ಕೈಗೊಂಡಿದ್ದ ಎನ್ನಲಾಗಿದ್ದು ವಿಚಾರಣೆ ಮುಗಿದ ಬಳಿಕ ಪಟ್ನಾದಲ್ಲಿನ ಕನ್ಕಾರ್‌ಬಾಗ್ ಪ್ರದೇಶದಲ್ಲಿ ನೆಲೆಸಿರುವ ಆತನ ಕುಟುಂಬದವರೊಡನೆ ತೆರಳಲು ಅವನಿಗೆ ಅನುಮತಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT