ಲಂಕಾ ಅಧ್ಯಕ್ಷರ ಹತ್ಯೆಗೆ ಸಂಚು: ಭಾರತೀಯನ ಬಂಧನ! 
ದೇಶ

ಲಂಕಾ ಅಧ್ಯಕ್ಷರ ಹತ್ಯೆಗೆ ಸಂಚು: ಭಾರತೀಯನ ಬಂಧನ!

ಶ್ರೀಲಂಕಾ ಅಧ್ಯಕ್ಷರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಭಾರತೀಯ ಪ್ರಜೆಯನ್ನು ಬಂಧಿಸಲಾಗಿದೆ.

ಶ್ರೀಲಂಕಾ: ಶ್ರೀಲಂಕಾ ಅಧ್ಯಕ್ಷರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಭಾರತೀಯ ಪ್ರಜೆಯನ್ನು ಬಂಧಿಸಲಾಗಿದೆ. 
ಲಂಕ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ, ಭಾರತೀಯ ಪ್ರಜೆಯಾದ ಎಂ ಥಾಮಸ್ ಎಂಬುವವರನ್ನು ಭ್ರಷ್ಟಾಚಾರ ವಿರೋಧಿ ಆಂಧೋಲನ ಕಾರ್ಯಾಚರಣೆಯ ನಿರ್ದೇಶಕ ನಮಲ್ ಕುಮಾರಾ ನಿವಾಸದಿಂದ  ಬಂಧಿಸಲಾಗಿದ್ದು, ಸಿಐಡಿ ಮುಖ್ಯಸ್ಥ ರಂಜಿತ್ ಮುನಾಸಿಂಘೆ ಫೋರ್ಟ್ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.
ಥಾಮಸ್ ನ್ನು ಹೆಚ್ಚಿನ ವಿಚಾರಣೆಗೊಳಪಡಿಸಲು ಮ್ಯಾಜಿಸ್ಟ್ರೇಟ್ ಜಯರತ್ನೆ ಸೂಚನೆ ನೀಡಿದ್ದಾರೆ. ಭಯೋತ್ಪಾದಕ ತನಿಖಾ ವಿಭಾಗದ ಮಾಜಿ ಉಸ್ತುವಾರಿಯಾಗಿದ್ದ ಡಿಐಜಿ ನಲಕ ಡೆ ಸಿಲ್ವ ಕುಮಾರ ಜೊತೆಗೆ ಸಿರಿಸೇನಾ ಅವರನ್ನು ಹತ್ಯೆ ಮಾಡುವ ಯೋಜನೆ ಬಗ್ಗೆ ಚರ್ಚೆ ನಡೆಸಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ.  ಈ ವಿಚಾರದ ಬಗ್ಗೆ ಹೆಚ್ಚಿನ ತನಿಖೆ ನಡೆಸಿದಾಗ ಥಾಮಸ್ ಹೆಸರೂ ಹೊರಬಂದಿದ್ದು ಸಂಚಿನ ಭಾಗವಾಗಿದ್ದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT