ಸಂಗ್ರಹ ಚಿತ್ರ 
ದೇಶ

'ನಕಲಿ ಆಧಾರ್ ಕಾರ್ಡ್ ಹೊಂದುವುದು ಅಸಾಧ್ಯ, ಆಧಾರ್ ಸುರಕ್ಷಿತವಾಗಿದೆ': ಎಂದ ಸುಪ್ರೀಂ ಕೋರ್ಟ್

ಆಧಾರ್ ಸುರಕ್ಷಿತವಾಗಿದ್ದು, ನಕಲಿ ಆಧಾರ್ ಹೊಂದುವುದು ಅಸಾಧ್ಯ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ನವದೆಹಲಿ: ಆಧಾರ್ ಸುರಕ್ಷಿತವಾಗಿದ್ದು, ನಕಲಿ ಆಧಾರ್ ಹೊಂದುವುದು ಅಸಾಧ್ಯ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಆಧಾರ್ ಸಿಂಧುತ್ವ ಕುರಿತು ಇಂದು ತನ್ನ ಅಂತಿಮ ತೀರ್ಪು ಪ್ರಕಟಿಸಿರುವ ಸುಪ್ರೀಂ ಕೋರ್ಟ್ ಪಂಚ ಸದಸ್ಯರ ಸಾಂವಿಧಾನಿಕ ಪೀಠ, ನಕಲಿ ಆಧಾರ್ ಹೊಂದಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ಬಗ್ಗೆ ತನ್ನ ಸುಮಾರು 40 ಪುಟಗಳ ತೀರ್ಪು ಓದಿರುವ ನ್ಯಾಯಮೂರ್ತಿ ಎಕೆ ಸಿಕ್ರಿ ಅವರು, ಆಧಾರ್ ನಕಲಿ ಸೃಷ್ಠಿ ಮಾಡಲು ಅವಕಾಶ ಇದ್ದರೆ ಅದನ್ನು ತಡೆಗಟ್ಟಿ, ಆಧಾರ್ ನಲ್ಲಿರುವ ಲೋಪದೋಷಗಳನ್ನು ಸರಿಪಡಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಆಧಾರ್ ನಲ್ಲಿ ಪ್ರಸ್ತುತ ಇರುವ ಸುರಕ್ಷತಾ ಮಾನದಂಡ ಸಮಾಧಾನಕರವಾಗಿದ್ದು, ಸಾಧ್ಯವಾದಷ್ಟೂ ಬೇಗ ಆಧಾರ್ ಮಾಹಿತಿಗೆ ಕನ್ನ ಹಾಕಲು ಸಾಧ್ಯವಾಗದ ಹಾಗೆ ಅತ್ಯಾಧುನಿಕ ಸುರಕ್ಷತಾ ಮಾರ್ಗಗಳ ಅನುಸರಿಸುವುದು ಒಳಿತು. ಆಧಾರ್ ದಾಖಲಾತಿಗಾಗಿ ಕೇವಲ ಕನಿಷ್ಠ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಆಧಾರ್ ದೇಶದ ಸಾಮಾನ್ಯ ನಾಗರಿಕರ ಗುರುತಾಗಿದೆ. ಆಧಾರ್‌ ಕಾರ್ಡ್‌ಗೂ ಗುರುತಿಗೂ ವ್ಯತ್ಯಾಸವಿದೆ. ಬಯೋಮೆಟ್ರಿಕ್‌ ಮಾಹಿತಿಯನ್ನು ಒಂದು ಬಾರಿ ಸಂಗ್ರಹ ಮಾಡಿದರೆ ಅದು ವ್ಯವಸ್ಥೆಯಲ್ಲೇ ಉಳಿಯಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಂತೆಯೇ ಆಧಾರ್ ಮಾಹಿತಿಯನ್ನು ಯಾವುದೇ ಸಂಸ್ಥೆ 6 ತಿಂಗಳಿಗೂ ಅಧಿಕ ಕಾಲ ಸಂಗ್ರಹಣೆ ಮಾಡಿ ಇಟ್ಟುಕೊಳ್ಳುವಂತಿಲ್ಲ. ಅಂತೆಯೇ ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ಅಕ್ರಮ ನುಸುಳುಕೋರರಿಗೆ ಆಧಾರ್ ನೀಡಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಅಂತೆಯೇ ದೇಶದ ಯಾವುದೇ ಮಗು ಕೂಡ ಆಧಾರ್ ಇಲ್ಲ ಎಂಬ ಕಾರಣಕ್ಕೆ ಸವಲತ್ತುಗಳಿಂದ ವಂಚಿತವಾಗಬಾರದೂ ಎಂದೂ ಸುಪ್ರೀಂ ಕೋರ್ಟ್ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT