ಅಯೋಧ್ಯಾ 
ದೇಶ

ರಾಮ ಜನ್ಮಭೂಮಿ ವಿವಾದ: ಅಕ್ಟೋಬರ್ 29ಕ್ಕೆ ಸುಪ್ರೀಂ ವಿಚಾರಣೆ ಪ್ರಾರಂಭ

ಅಯೋಧ್ಯೆಯ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 29ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ: ಅಯೋಧ್ಯೆಯ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 29ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ಮಸೀದಿಯು ಇಸ್ಲಾಂ ನ ಅವಿಭಾಜ್ಯ ಅಂಗವಲ್ಲ ಎನ್ನುವ 1994 ರ ಫಾರೂಕಿ ಪ್ರಕರಣದ ತೀರ್ಪನ್ನು ಸುಪ್ರೀಂ  ಕೋರ್ಟ್ ಇಂದು ಎತ್ತಿ ಹಿಡಿದಿದೆ. ಈ ಸಂದರ್ಭದಲ್ಲಿ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದ ವಿಚಾರಣೆ ದಿನಾಂಕ ನಿಗದಿಗೊಳಿಸಿ ಕೋರ್ಟ್ ಆದೇಶ ನಿಡಿದೆ.
ಪ್ರಸಕ್ತ ಭಾರತ ಮುಖ್ಯ ನ್ಯಾಯಮೂರ್ತಿಗಳಾಗಿರುವ ದೀಪಕ್ ಮಿಶ್ರಾ ಅಕ್ಟೋಬರ್ 2 ರಂದು ನಿವೃತ್ತರಾಗಲಿದ್ದು ವಿವಾದಿತ ಜಾಗಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಹೊಅದಾಗಿ ರಚನೆಯಾಗುವ ತ್ರಿಸದಸ್ಯ ಪೀಠ ಆಲಿಸಲಿದೆ.
2010ರ ಅಲಹಬಾದ್ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಅರ್ಜಿ ವಿಚಾರಣೆಯು ಸುಪ್ರೀಂ ನಲ್ಲಿ ನಡೆಯುತ್ತಿದ್ದು ಇದರ ಬಾಗವಾಗಿ ಸಿಜೆಐ ಮಿಶ್ರಾ ನೇತೃತ್ವದ ಮೂರು ನ್ಯಾಯಾಧೀಶರ ಪೀಠ ಇಂದು (ಗುರುವಾರ) ಮಸೀದಿಯು ಇಸ್ಲಾಂನ ಅವೈಭಾಜ್ಯ ಅಂಗವೆ ಎನ್ನುವ ಕುರಿತಂತೆ ಫಾರೂಕಿ ತೀರ್ಪನ್ನೇ ಎತ್ತಿ ಹಿಡಿದಿದೆ.
ಅಲಹಬಾದ್ ಹೈಕೋರ್ಟ್ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರಾ ಮತ್ತು ರಾಮ್ ಲಾಲ್ಲಾ ಪಕ್ಷಗಳಿಗೆ 2.77 ಎಕರೆ ಭೂಮಿಯನ್ನು ಸಮಾನವಾಗಿ ವಿಂಗಡಿಸಬೇಕೆಂದು ತೀರ್ಪು ನೀಡಿದ್ದು ಹೈಕೋರ್ಟ್ ನ ಮೂವರು ನ್ಯಾಯಾಧೀಶರ ಪೀಠ  2: 1 ಬಹುಮತದ ಆಧಾರದಲ್ಲಿ ತೀರ್ಪು ಪ್ರಕಟಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT