ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಉಗ್ರರ ಶೋಧ ಕಾರ್ಯಾಚರಣೆ ವೇಳೆ ನಾಗರಿಕನ ಸಾವು

ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ನಾಗರಿಕ ಮೃತಪಟ್ಟಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ಮೂರು ಕಡೆ ಎನ್‌ಕೌಂಟರ್‌ ನಡೆದಿದೆ. ಅನಂತ್‌ನಾಗ್ ಜಿಲ್ಲೆಯ ನೂರುಬಾಗ್ ಸಮೀ ಪದಲ್ಲಿ ಗುಂಡಿನ ಚಕಮಕಿ ನಡೆದಿದೆ....

ಶ್ರೀನಗರ: ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ನಾಗರಿಕ ಮೃತಪಟ್ಟಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮೂರು ಕಡೆ ಎನ್‌ಕೌಂಟರ್‌ ನಡೆದಿದೆ. ಅನಂತ್‌ನಾಗ್ ಜಿಲ್ಲೆಯ  ನೂರುಬಾಗ್ಸ ಮೀಪದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಈ ಪ್ರದೇಶದಲ್ಲಿ ಇನ್ನಷ್ಟು ಮಂದಿ ಉಗ್ರರು ಅಡಗಿರುವ ಶಂಕೆ ಮೇರೆಗೆ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಖಚಿತ ಮಾಹಿತಿ ಮೇರೆಗೆ ಸೇನೆಯು ಎನ್‌ಕೌಂಟರ್‌ ನಡೆಸಿದ್ದು ಒಬ್ಬ ನಾಗರಿಕ ಮೃತಪಟ್ಟಿದ್ದಾರೆ.
ಕಾರ್ಯಾಚರಣೆ ಹಿನ್ನಲೆಯಲ್ಲಿ ಅನಂತ್​ನಾಗ್, ಶ್ರೀನಗರ ಹಾಗೂ ಬುಡ್ಗಾಮ್ ಜಿಲ್ಲೆಯಲ್ಲಿ ಇಂಟರ್‌ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಶ್ರೀನಗರದ ನೂರಾಬಾಗ್ ಪ್ರದೇಶದಲ್ಲಿ ಉಗ್ರರು ಮನೆಗಳಲ್ಲಿ ಅಡಗಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆ ಕೈಗೊಂಡ ಹುಡುಕಾಟ ಕಾರ್ಯಾಚರಣೆ ವೇಳೆ ಉಗ್ರರು ಅಡಗಿದ್ದ ಮನೆಯ ಮಾಲಿಕ ಮೃತಪಟ್ಟಿದ್ದಾನೆ. 
ಮೃತನನ್ನು ಮೊಹಮದ್ ಸಲೀಂ ಎಂದು ಗುರುತಿಸಲಾಗಿದೆ, ಸಲೀಂ ಬುಲೆಟ್ ಗಳಿಂದಲೇ ಮೃತ ಪಟ್ಟಿದ್ದಾರೆಯೇ ಎಂಬುದು ಖಚಿತವಾಗಿಲ್ಲ, ಭದ್ರತಾ ಪಡೆ ಯೋಧರಿಂದಲೋ ಅಥವಾ ಉಗ್ರರ ಗುಂಡಿಗೆ ಬಲಿಯಾಗಿದ್ದಾರೋ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಭದ್ರತಾ ಪಡೆಯ ಗುಂಡಿಗೆ ಆತ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ. ಇದರಿಂದ ಕ್ರೋಧಗೊಂಡ ನಾಗರಿಕರು ಭದ್ರತಾ ಪಡೆಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸೆ. 9ರಂದು ಗೃಹ ಸಚಿವಾಲಯದೊಂದಿಗೆ ಮಾತುಕತೆಗೆ ಮುನ್ನ ಹೋರಾಟ ತೀವ್ರ: ಲಡಾಖ್ ಉನ್ನತ ಮಂಡಳಿ ಎಚ್ಚರಿಕೆ

ಕೇರಳಂನ ತ್ರಿಶೂರ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ: ತಮಿಳು ನಾಡಿನ ಎಂಟು ಮಂದಿ ಸಾವು, 7 ಎಂಜಿನಿಯರಿಂಗ್ ವಿದ್ಯಾರ್ಥಿಗಳು; Video

ಮತ್ತೊಂದು ಮಹಾಯುದ್ಧದ ಭೀತಿ: ಇರಾನ್‌ನ 'Pickaxe Mountain' ಧ್ವಂಸಕ್ಕೆ ಅಮೆರಿಕ ಸ್ಕೆಚ್, "ಶೀಘ್ರದಲ್ಲೇ ದಾಳಿ" ಎಂದ ಡೊನಾಲ್ಡ್ ಟ್ರಂಪ್..!

ಪ್ರಧಾನಿ ಮೋದಿ ಮೆಚ್ಚಿದ ಇಡ್ಲಿ ನಿಂಗಮ್ಮನಿಗೆ ಸಂಕಷ್ಟ: ಅಂಗಡಿ ನಡೆಸದಂತೆ GBA ಅಧಿಕಾರಿಗಳ ವಾರ್ನಿಂಗ್!

CJP ಪ್ರತಿಭಟನೆ ವೇಳೆ ಹೆಸರು ದುರುಪಯೋಗ: 'ಬಲಪಂಥೀಯ' ಇನ್‌ಫ್ಲ್ಯುಯೆನ್ಸರ್ ವಿರುದ್ಧ ಕೇಸ್ ದಾಖಲಿಸಿದ ಚಿರಾಗ್ ಪಾಸ್ವಾನ್