ಸುಭಾಶ್ ವೆಲಿಂಗ್ ಕರ್ 
ದೇಶ

ಹಣ ಖರ್ಚು ಮಾಡದಿದ್ದರೇ ಶ್ರೀರಾಮ ಕೂಡ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ: ಸುಭಾಷ್ ವೆಲಿಂಗ್ ಕಾರ್

ಸದ್ಯದ ದೇಶದಲ್ಲಿರುವ ರಾಜಕೀಯ ಪರಿಸ್ಥಿತಿಯಲ್ಲಿ ಹಣ ಖರ್ಚು ಮಾಡದಿದ್ದರೇ ದೇವ ಶ್ರೀರಾಮ ಕೂಡ ಚುನಾವಣೆ ಗೆಲ್ಲುವುದು ಸಾಧ್ಯವಿಲ್ಲ ಎಂದು ಗೋವಾ ಆರ್ ಎಸ್ ಎಸ್ ...

ಪಣಜಿ:  ಸದ್ಯದ ದೇಶದಲ್ಲಿರುವ ರಾಜಕೀಯ ಪರಿಸ್ಥಿತಿಯಲ್ಲಿ ಹಣ ಖರ್ಚು ಮಾಡದಿದ್ದರೇ ದೇವ ಶ್ರೀರಾಮ ಕೂಡ ಚುನಾವಣೆ ಗೆಲ್ಲುವುದು ಸಾಧ್ಯವಿಲ್ಲ ಎಂದು ಗೋವಾ ಆರ್ ಎಸ್ ಎಸ್ ನ ಮಾಜಿ ಅಧ್ಯಕ್ಷ ಸುಭಾಶ್ ವೆಲಿಂಗ್ ಕರ್ ಹೇಳಿದ್ದಾರೆ.
ಗೋವಾ ಸುರಕ್ಷಾ ಮಂಚ್ ನ ಯುವ ಸಮೂಹವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಸಕ್ತ ರಾಜಕೀಯ ಪರಿಸ್ಥಿತಿಯಲ್ಲಿ ಶ್ರೀರಾಮ ಕೂಡಾ ಹಣ ಖರ್ಚು ಮಾಡಿಯೇ ಚುನಾವಣೆಯಲ್ಲಿ ಗೆಲ್ಲಬೇಕಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಇತ್ತೀಚೆಗಿನ ಚುನಾವಣೆಗಳಲ್ಲಿ ರಾಜಕಾರಣಿಗಳು ಯುವಕರು ಮತ್ತು ಮಹಿಳೆಯರು ಎಂಬ ಎರಡು ವಿಧದ ವಿಭಾಗ ಮಾಡುವ ಮೂಲಕ ಕಾರ್ಯನಿರ್ವಹಿಸುತ್ತಿದ್ದಾರೆ. ಮತ ಗಳಿಸಲು ಯುವ ಸಮೂಹ ಮತ್ತು ಮಹಿಳೆಯರನ್ನು ಗುರಿಯಾಗಿರಿಸಿ ಹಣ, ಉಡುಗೊರೆ ಹಾಗೂ ಇನ್ನಿತರ  ಅಮಿಷವೊಡ್ಡುತ್ತಿದ್ದಾರೆ ಎಂದು ಆರೋಪಿಸಿದರು.
ಗೋವಾ ಸಿಎಂ ಮನೋಹರ್ ಪರಿಕ್ಕರ್ ವಿರುದ್ದ ವಾಗ್ದಾಳಿ ನಡೆಸಿದ ಸುಭಾಷ್, ಅನಾರೋಗ್ಯದ ಕಾರಣ ನೀಡಿ ಇಬ್ಬರು ಸಚಿವರನ್ನು ಸಂಪುಟದಿಂದ ಕೈ ಬಿಟ್ಟಿದ್ದಾರೆ, ಆದರೆ ಸ್ವತಃ ಪರಿಕ್ಕರ್ ಅವರೇ ತೀವ್ರ ಅನಾರೋಗ್ಯದಿಂದ ನರಳುತ್ತಿದ್ದಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT