ಬಾಬಾ ರಾಮ್ ದೇವ್ 
ದೇಶ

ಅಧಿಕಾರಕ್ಕೆ ಬರಲು ಶ್ರೀರಾಮನನ್ನು ಮಾಧ್ಯಮವನ್ನಾಗಿ ಮಾಡಿಕೊಳ್ಳಬಾರದು: ಬಾಬಾ ರಾಮ್ ದೇವ್

ಹಿಂದೂಗಳ ದೇವರಾದ ಶ್ರೀರಾಮನನ್ನು ಯಾರೇ ಆಗಲಿ ತಮ್ಮ ಅಧಿಕಾರ, ಅಥವಾ ಪದವಿ ಹೊಂದುವುದಕ್ಕಾಗಿ ಸಾಧನವಾಗಿ ಬಳಸಬಾರದು ಎಂದು ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.

ಹರಿದ್ವಾರ: ಹಿಂದೂಗಳ ದೇವರಾದ ಶ್ರೀರಾಮನನ್ನು ಯಾರೇ ಆಗಲಿ ತಮ್ಮ ಅಧಿಕಾರ, ಅಥವಾ ಪದವಿ ಹೊಂದುವುದಕ್ಕಾಗಿ ಸಾಧನವಾಗಿ ಬಳಸಬಾರದು ಎಂದು ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.
"ರಾಮನು ನನ್ನ ಪಾಲಿಗೆ ಓರ್ವ ಆದರ್ಶ ವ್ಯಕ್ತಿಯಾಗ್ಗಿದ್ದಾನೆ. ಈತನೊಂದು ರಾಷ್ಟ್ರೀಯ ಚಿನ್ಹೆಯಂತಿದ್ದು ಇದರಲ್ಲಿ ಯಾವ ರಾಜಕೀಯ ಉದ್ದೇಶವಿರುವುದನ್ನು ನಾನು ಕಾಣಲಾರೆ. ರಾಮನು ನಮ್ಮ ಪೂರ್ವಜನಾಗಿದ್ದು ಆತ ನಮ್ಮ ಹೆಮ್ಮೆಯ ಗುರುತಾಗಿದ್ದಾನೆ.ಹೀಗಾಗಿ ಶ್ರೀರಾಮನ ಹೆಸರಲ್ಲಿ ’ಪವರ್ ಪಾಲಿಟಿಕ್ಸ್’ ನಡೆಸುವುದು ಸರಿಯಲ್ಲ" ರಾಮ್ ದೇವ್ ಎ.ಎನ್.ಐ. ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಮಸೀದಿಯು ಇಸ್ಲಾಂನ ಅವಿಭಾಜ್ಯ ಅಂಗವಾಗಿಲ್ಲ ಎನ್ನುವ ಸುಪ್ರೀಂ ಕೋರ್ಟ್ ನ ತೀರ್ಪಿನ ಕುರಿತು ಮಾತನಾಡಿದ ರಾಮ್ ದೇವ್  "ದೇವರು ಸರ್ವಾಂತರ್ಯಾಮಿ, ಅವನನ್ನು ನಾವೆಲ್ಲಿದ್ದರೂ ಪೂಜಿಸಬಹುದು. ಮೊದಲು ನಾವು ಮಾಡುವ ಕೆಲಸಗಳಲ್ಲಿ ದೇವರನ್ನು ಕಾಣಬೇಕು. ಇದೇ ನಿಜವಾದ ಪೂಜೆ. ನಮ್ಮ ಕೆಲಸಗಳು ಉತ್ತಮವಾಗಿದ್ದರೆ ದ್ವರ ಆಶೀರ್ವಾದ ನಮಗಿದ್ದೇ ಇರುತ್ತದೆ" ಎಂದರು.
ನಮ್ಮ ನ್ಯಾಯಾಂಗ ವ್ಯವಸ್ಥೆ ಉತ್ತಮವಾಗಿದ್ದು ನಾನು ನ್ಯಾಯಾಲಯ ಏನೇ ತಿರ್ಪು ನೀಡಿದರೂ ಅದು ಉತ್ತಮವಾಗಿಯೇ ಇರಲಿದೆ ಎಂದು ಭಾವಿಸುತ್ತೇನೆ ಎಂದು ರಾಮ್ ದೇವ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT