ಸಂಬೀತ್ ಪಾತ್ರ 
ದೇಶ

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಸುಪ್ರೀಂ ಆದೇಶ :ನಿಲುವು ಸಮರ್ಥಿಸಿಕೊಂಡ ಬಿಜೆಪಿ

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ನೀಡಿರುವ ತೀರ್ಪಿನಲ್ಲಿ ನಮ್ಮ ನಿಲುವನ್ನು ಸಮರ್ಥಿಸಲಾಗಿದೆ ಎಂದು ಬಿಜೆಪಿ ಬಿಂಬಿಸಿಕೊಳ್ಳುತ್ತಿದೆ.

ನವದೆಹಲಿ:ಭೀಮಾ ಕೋರೆಗಾಂವ್   ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ನೀಡಿರುವ ತೀರ್ಪಿನಲ್ಲಿ  ನಮ್ಮ ನಿಲುವನ್ನು ಸಮರ್ಥಿಸಲಾಗಿದೆ ಎಂದು ಬಿಜೆಪಿ ಬಿಂಬಿಸಿಕೊಳ್ಳುತ್ತಿದ್ದು, ಕಾಂಗ್ರೆಸಿಗೆ ಸೋಲಾಗಿದೆ ರಾಷ್ಟ್ರೀಯ  ಭದ್ರತೆ ವಿಚಾರದಲ್ಲಿ ಆಟವಾಡುವ ರಾಹುಲ್ ಗಾಂಧಿಗೆ ಅವಮಾನವಾಗಿದ್ದು, ಕೊರಳಿಗೆ ತಾನೇ  ತಲೆಯೊಡ್ಡುವಂತಾಗಿದೆ ಎಂದು ಹೇಳಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ಬಂಧಿಸಿರುವ ಐವರು ಸಾಮಾಜಿಕ ಹೋರಾಟಗಾರರ ವಿಚಾರದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಬಂಧನ ಕುರಿತು ತನಿಖೆ ನಡೆಸಲು  ವಿಶೇಷ ತನಿಖಾ ತಂಡ ನೇಮಕಮಾಡಲು ನಿರಾಕರಿಸಿದೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಬಿಜೆಪಿ ವಕ್ತಾರ ಸಂಬೀತ್ ಪಾತ್ರ, ಇದು ದೇಶಕ್ಕೆ ಚಾರಿತ್ರಿಕ ದಿನವಾಗಿದೆ. ಸುಪ್ರೀಂ ಆದೇಶದ ಮೂಲಕ ದೇಶದ ಭದ್ರತೆ ಹಾಗೂ ಸುರಕ್ಷತೆ ವಿಚಾರದಲ್ಲಿ ಗೆಲುವಾಗಿದೆ ಎಂದರು.

ರಾಹುಲ್ ಗಾಂಧಿಗೆ ದೇಶದ ಭದ್ರತೆ ವಿಚಾರಕ್ಕಿಂತಲೂ ರಾಜಕೀಯ ಅಜೆಂಡಾವೇ ಪ್ರಮುಖವಾಗಿದೆ. ದೇಶದೊಂದಿಗೆ ಏಕೆ ನಿಲುವು ತೆಗೆದುಕೊಳ್ಳುವುದಿಲ್ಲ. ನಿಮ್ಮ ನಿಲುವು ಏಕೆ ದೇಶ ವಿರೋಧಿ ಶಕ್ತಿಗಳೊಂದಿಗಿರುತ್ತದೆ ಎಂದು ಪ್ರಶ್ನಿಸಿದರು.

ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ ಸಂಬೀತ್ ಪಾತ್ರ,ಕಾಂಗ್ರೆಸ್  ಪಕ್ಷದ ಮಿತ್ರ ಪಕ್ಷಗಳೇ ರಾಹುಲ್ ಗಾಂಧಿಯನ್ನು ನಾಯಕನೆಂದು ಒಪ್ಪಿಕೊಂಡಿಲ್ಲ.ತನ್ನನ್ನು ತಾನೇ ಸಮರ್ಥಿಸಿಕೊಳ್ಳುತ್ತಾರೆ ಎಂದು ಟೀಕಿಸಿದರು. ಸರ್ಜಿಕಲ್ ಸ್ಟ್ರೈಕ್ ನ  ಎರಡನೇ ವಾರ್ಷಿಕೋತ್ಸವ ಅಂಗವಾಗಿ ನಾಳೆ ಬಿಜೆಪಿ ವತಿಯಿಂದ ಶೌರ್ಯ ದಿವಸ್  ಆಚರಿಸುತ್ತಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT