ಪುರಿ ಜಗನ್ನಾಥ ದೇವಾಲಯ 
ದೇಶ

ಇನ್ನು ಮುಂದೆ ಪುರಿ ಜಗನ್ನಾಥನನ್ನ ಕಾಣಲು ಕ್ಯೂನಲ್ಲಿ ಬನ್ನಿ! ಅಕ್ಟೋಬರ್ 1ರಿಂದ ಹೊಸ ವ್ಯವಸ್ಥೆ

ವಿಶ್ವವಿಖ್ಯಾತ ಒಡಿಶಾದ ಪುರಿ ಜಗನ್ನಾಥ ದೇವಾಲಯದಲ್ಲಿ ಅಕ್ಟೋಬರ್ 1 ರಿಂದ ಕ್ಯೂ ವ್ಯವಸ್ಥೆಯನ್ನು ಜಾರಿಗೆ ಬರಲಿದೆ. ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ದೇವಸ್ಥಾನದಲ್ಲಿ ಕ್ಯೂ ವ್ಯವಸ್ಥೆಯನ್ನು....

ಪುರಿ: ವಿಶ್ವವಿಖ್ಯಾತ ಒಡಿಶಾದ ಪುರಿ ಜಗನ್ನಾಥ ದೇವಾಲಯದಲ್ಲಿ ಅಕ್ಟೋಬರ್ 1 ರಿಂದ  ಕ್ಯೂ ವ್ಯವಸ್ಥೆಯನ್ನು ಜಾರಿಗೆ ಬರಲಿದೆ. ಸುಪ್ರೀಂಕೋರ್ಟ್ ಸೂಚನೆ ಮೇರೆಗೆ  ದೇವಸ್ಥಾನದಲ್ಲಿ ಕ್ಯೂ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲು  ಶ್ರೀ ಜಗನ್ನಾಥ ದೇವಾಲಯದ ಆಡಳಿತ (ಎಸ್ಜೆಟಿಎ) ತೀರ್ಮಾನಿಸಿದೆ.
ದೇವಾಲಯದ ವ್ಯವಹಾರಗಳನ್ನು ಸುಗಮಗೊಳಿಸಲು ಸುಪ್ರೀಂ ಕೋರ್ಟ್ ನೀಡಿರುವ 12  ಸೂಚನೆಗಳ ಪೈಕಿ 10 ಸೂಚನೆಗಳನ್ನು ಜಾರಿಗೆ ತರಲು ನಾವು ತೀರ್ಮಾನಿಸಿದ್ದೇವೆ ಎಂದು ಎಸ್ಜೆಟಿಎ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರದೀಪ್ತ ಮಹಾಪಾತ್ರ ಹೇಳಿದ್ದಾರೆ.
ವರದಿಗಳ ಪ್ರಕಾರ, ಭಕ್ತರು ಸಿಂಹದ್ವಾರದಿಂದ ಕ್ಯೂ ನಲ್ಲಿ ಆಗಮಿಸಲಿದ್ದಾರೆ.ಹಾಗೂ ಬ್ಯಾರಿಕೇಡ್ ಗಳ ಮೂಲಕ ದೇವಾಲಯಕ್ಕೆ ತೆರಳಲಿದ್ದಾರೆ .ದರ್ಶನದ ನಂತರ, ಭಕ್ತರು ಉತ್ತರಾದ್ವಾರ ಮೂಲಕ ಭಕ್ತರು ಹೊರಬರಲಿದ್ದಾರೆ.ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಕ್ಯೂ ಇರಲಿದೆ.
ಇದೇ ವೇಳೆ ಜನರ ಗುಂಪುಗಳನ್ನು ನಿಯಂತ್ರಿಸುವ ಸಲುವಾಗಿ ಅಲ್ಲಲ್ಲಿ ಹೆಚ್ಚುವರಿ ಸ್ಥಳಾವಕಾಶ ಸಹ ಇರಲಿದೆ.
ಜಗದನ್ನಾಥ ದೇವಸ್ಥಾನ ನಿರ್ವಹಣಾ ಸಮಿತಿಯ ಸಭೆಯಲ್ಲಿ, ಗಜಪತಿ ಮಹಾರಾಜ ದಿಬ್ಯಾಸಿಸ್ ದೇಬ್ ನೇತೃತ್ವ ವಹಿಸಿದ್ದು ದೇವಾಲಯಕ್ಕೆ ಸಂದಾಯವಾಗುವ ಎಲ್ಲಾ ಬೆಳ್ಳಿ, ಚಿನ್ನಗಳನ್ನು ಪ್ರತಿ ಸೋಮವಾರ ಬ್ಯಾಂಕ್ ಲಾಕರ್ ನಲ್ಲಿ ಇರಿಸುವ ವ್ಯವಸ್ಥೆ ತರಲಾಗುತ್ತದೆ. ಅಲ್ಲದೆ ಎಲಾ ಬೆಲೆಬಾಳುವ ವಸ್ತುಗಳನ್ನು ಎಸ್ಜೆಟಿಎ ಚಿನ್ನದ ಬಾಂಡ್ ಆಗಿ ಪರಿವರ್ತಿಸಬೇಕು ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT